National News:ಅಮರನಾಥ ಯಾತ್ರೆಗೆಂದು ಹೋಗಿದ್ದ ಕನ್ನಡಿಗರು ಸಂಖಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದಾಗಿ ಯಾತ್ರಿಕರು ರಸ್ತೆ ಮಧ್ಯೆ ಸಿಲುಕಿದ್ದಾರೆ. ಒಟ್ಟು 80 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಗದಗದಿಂದ 23ಮಂದಿ ಸೇರಿ 80 ಮಂದಿ ಕನ್ನಡಿಗರು ಇದ್ದಾರೆ ಎಂಬ ಮಾಹಿತಿ ಇದೆ.
ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆ ಮಧ್ಯೆ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.
ಮಿಲಿಟರಿ ಪಡೆಯಿಂದ ಯಾತ್ರಿಕರನ್ನು ಮರಳಿ ಕರೆತರಲು ಪ್ರಯತ್ನಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾತ್ರಿಗಳ ಸಹಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದೆ.




