Banglore News: ಬೆಂಗಳೂರಿನಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದೆ. 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್ ಬಳಿಯ ಕಟ್ಟಡದಲ್ಲಿ ನಡೆದಿದೆ.
ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ತುಂಬಾ ದಟ್ಟ ಹೊಗೆ ವ್ಯಾಪಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
C.M Nimbanna : ಕಲಘಟಗಿ ಬಿಜೆಪಿ ಮಾಜೀ ಶಾಸಕ ಸಿಎಂ ನಿಂಬಣ್ಣವರ ಸಾವು, ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ
Mahesh tenginakayi : ಸಿಎಂ ನಿಂಬಣ್ಣವರ್ ನಿಧನಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಂತಾಪ
Prahlad Joshi : ಆರೋಪಿಯನ್ನು ರಕ್ಷಿಸಲು ಪ್ರಯತ್ನ ಪಡ್ತಾರೆ ಅಂದ್ರೆ ಇದು ಆಘಾತಕಾರಿ : ಜೋಶಿ