Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.
ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ ಬಗ್ಗೆ ಸರ್ಕಾರಕ್ಕೆ ಏನು ಗೌರವವಿದೆ. ತನಿಖೆಗೂ ಮೊದಲೇ ಏನೂ ಆಗಿಲ್ಲ ಅಂದ್ರೆ ಪೊಲೀಸರು ಉಡುಪಿ ಪ್ರಕರಣವನ್ನ ಮುಚ್ಚಿ ಹಾಕುತ್ತಾರೆ.
ಪ್ರಕರಣದಲ್ಲಿ ಏನು ಇಲ್ಲಾ ಅಂದ್ರೆ, ವಾರ ಬಿಟ್ಟು ಎಫ್ಐಆರ್ ಯಾಕೆ ಹಾಕಿದ್ರು? ಎಲ್ಲಾ ಮುಚ್ಚಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Notice : ಮನಸ್ಸಿಗೆ ಬಂದಂತೆ ವಾಹನ ಚಲಾಯಿಸಿದರೆ ಮನೆಗೆ ಬರಲಿದೆ ನೋಟೀಸ್..?!
Reshma Bharath : ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ : ರೇಶ್ಮಾ ಭರತ್ ನಾಯಕ್ ಬೆಳಂಜಾಲೆ