National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಎನ್ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ ಹೆಚ್ಚಾಗುತ್ತದೆ, ಈ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 140 ಕೋಟಿ ಜನರಿಗೆ ಅರ್ಪಿಸುತ್ತೇನೆ, ಇ ದರೊಂದಿಗೆ ಪ್ರಶಸ್ತಿಯೊಂದಿಗೆ ಪಡೆದ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ನೀಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದರು.
ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಬಾಲಗಂಗಾಧರ್ ತಿಲಕ್ ಅವರ ಕೊಡುಗೆ ಅಪಾರವಾದದ್ದು, ದೊಡ್ಡ ಲಕ್ಷ್ಯವನ್ನು ಸಾಧಿಸಬೇಕಾದರೆ ಅವರು ದೇಶಕ್ಕೆ ತಮ್ಮನ್ನು ಸಮರ್ಪಿಸಲು ಕೂಡ ಸಿದ್ಧರಿದ್ದರು, ಅಷ್ಟೇ ಅಲ್ಲದೆ ವಿರೋಧಿಗಳ ವಿರುದ್ಧ ಹೋರಾಡಲು ವ್ಯವಸ್ಥೆಯನ್ನು ಸಿದ್ಧಪಡಿಸಿದ್ದರು, ಜತೆಗೆ ವಿಶ್ವಾಸದೊಂದಿಗೆ ಎಲ್ಲರನ್ನೂ ಜತೆಗೆ ಕೊಂಡೊಯ್ಯುವಂಥವರಾಗಿದ್ದರು ಎಂದು ಪ್ರಧಾನಿ ಮೋದಿ ತಿಲಕರ ಸಾಧನೆಯನ್ನು ಪುನರುಚ್ಛರಿಸಿದರು.
gyanvapi : ಜ್ಞಾನವಾಪಿ ಕುರಿತು ಯೋಗಿ ಆದಿತ್ಯಾ ನಾಥ್ ಹೇಳಿರುವ ಮಾತು ಚರ್ಚೆ
Uttar pradesh: ಅಮಾಯಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ಹಣ ದೋಚಿದ್ದಾರೆ.