Eshwar Khandre : ತಾಲೂಕ ಮಟ್ಟದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಈಶ್ವರ್ ಖಂಡ್ರೆ ..!

ಬೀದರ್: ಬಸವಕಲ್ಯಾಣ ನಗರದ ಬಿಕೆಡಿಬಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆಯವರು ಖಡಕ್ ಆಗಿ ಎಚ್ಚರಿಕೆ ನೀಡುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಬಡವರ ಮತ್ತು ನಿರ್ಗತಿಕರ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಬೇಕು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಅರ್ಹಫಲಾನುಭವಿಗಳಿಗೆ ಮುಟ್ಟಿಸಲು ಕಾಳಜಿ ವಹಿಸಬೇಕು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮದಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆ ಹರಿಸುವ ಕೆಲಸ ಮಾಡಬೇಕು. ಸರ್ಕಾರಿ ಆಸ್ಪತ್ರೆಗೆ ಬರುವ ಬಡವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಕಾಳಜಿ ವಹಿಸಬೇಕು ಬಾಣಂತಿಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ಸಭೆಯಲ್ಲಿ ಸಚಿವ ರಹಿಂಖಾನ್ ಬಸವಕಲ್ಯಾಣ ಶಾಸಕ ಶರಣು ಸಲಗರ್ ಸೇರಿ ಹಲವಾರು ಭಾಗಿಯಾಗಿದ್ಧರು.

K H Muniyappa : ಈ ತಿಂಗಳೂ ಅಕ್ಕಿ ಬದಲಾಗಿ ಹಣ ನೀಡಲಾಗುವುದು  : ಸಚಿವ ಕೆ.ಹೆಚ್.ಮುನಿಯಪ್ಪ

S S Mallikharjun : ಸಚಿವರ ವಿರುದ್ಧ ದಲಿತ ಸಮುದಾಯ ನಿಂದನೆ ಆರೋಪ..?!

Garbage : ಸ್ವಚ್ಛ ನಗರ, ಸುಂದರ ನಗರಕ್ಕೆ ಒತ್ತು- ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ

About The Author