ಹುಣಸೂರು: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಮ್ಮ ಇಲಾಖೆಯ ತಂತ್ರಾಂಶದ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಇದರಿಂದಾಗಿ ಹೊಸ ಅರ್ಜಿ ಸಲ್ಲಿಕೆ, ಹೊಸ ಪಡಿತರ ಚೀಟಿ ವಿತರಣೆ, ಪರಿಷ್ಕರಣೆ ಅಥವಾ ತಿದ್ದುಪಡಿ ಕಾರ್ಯವೂ ಸ್ಥಗಿತವಾಗಿತ್ತು. ಕಳೆದ 4 ತಿಂಗಳಿಂದ ಸ್ಥಗಿತವಾಗಿದ್ದ ಆಹಾರ ಇಲಾಖೆಯ ತಂತ್ರಾಂಶಕ್ಕೆ ಆ.16 ರಿಂದ ಆ.19 ವರೆಗೆ ಪೂರ್ವಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿತ್ತು.
ಸಾರ್ವಜನಿಕರ ಒತ್ತಾಯದ ಮೇಲೆ ಸರ್ಕಾರ ಆ.21ವರೆಗೆ ಕಾಲಾವಧಿ ವಿಸ್ತರಿಸಿ ಅವಕಾಶ ಕಲ್ಪಿಸಿದೆ. ಆದರೆ, ಗೃಹಲಕ್ಷ್ಮಿ ಯೋಜನೆ ಘೋಷಣೆ ನಂತರ ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿ, ಫೋಟೊ ಹಾಗೂ ನ್ಯಾಯಬೆಲೆ ಅಂಗಡಿ ಬದಲಾವಣೆ, ಹೊಸ ಹೆಸರು ಸೇರಿಸುವುದು ಹಾಗೂ ಈಗಾಗಲೇ ಚೀಟಿಯಲ್ಲಿರುವ ಹೆಸರನ್ನು ತೆಗೆದು ಹಾಕುವುದಕ್ಕೆ ಅವಕಾಶ ನೀಡಲಾಗಿದೆ. ಫಲಾನುಭವಿಗಳ ತುರ್ತಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಆನ್ಲೈನ್ ಸೆಂಟರ್ಗಳ ಮುಂದೆ ಪಡಿತರ ಚೀಟಿ ತಿದ್ದುಪಡಿಗಾಗಿ ಸರತಿ ಸಾಲಿನಲ್ಲಿ ಮಹಿಳೆಯರು, ವೃದ್ಧರು, ಸಾರ್ವಜನಿಕರು ಆನ್ಲೈನ್ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಕಾಯ್ದು ಸುಸ್ತಾಗಿದ್ದಾರೆ. ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
Satish Jarkiholi: ತಾಂತ್ರಿಕ ದೋಷದಿಂದಾಗಿ ಲಿಫ್ಟ್ ನಲ್ಲಿ ಸಿಲುಕಿದ್ದ ಸತೀಶ್ ಜಾರಕಿಹೊಳೆ ಪುತ್ರ
Lawyer meeting: ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ
Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್