ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ರವ್ರು, ರೋಹಿತ್ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ.
ಐವರು ಪರಿಣಿತ ಬ್ಯಾಟ್ಸ್ಮನ್ಗಳು, ಇಬ್ಬರು ಕೀಪರ್ಸ್, ಮೂವರು ಆಲ್ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್ನ್ನು ಆಯ್ಕೆ ಮಾಡಲಾಗಿದೆ. ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಓಪನರ್ಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಬ್ಯಾಕಪ್ ಓಪನರ್ ಹಾಗೂ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ.
ತಂಡದಲ್ಲಿರೋ ಏಕೈಕ ಕನ್ನಡಿಗ ಅಂದ್ರೆ ಕೆ.ಎಲ್ ರಾಹುಲ್ ಮಾತ್ರ. ಇನ್ನು ಏಷ್ಯಾಕಪ್ನಲ್ಲಿ ಸ್ಥಾನ ಪಡೆದಿರೋ ತಿಲಕ್ ವರ್ಮಾ, ಸ್ಟ್ಯಾಂಡ್ ಬೈ ಆಟಗಾರ ಸಂಜು ಸ್ಯಾಮ್ಸನ್ ಹಾಗೂ ಯಜ್ವೇಂದ್ರ ಚಹಾಲ್ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ವಿಶ್ವಕಪ್ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ) ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಇಶಾನ್ ಕಿಶನ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ) ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮದ್ ಶಮಿ, ಮೊಹಮದ್ ಸಿರಾಜ್, ಕುಲ್ದೀಪ್ ಯಾದವ್.
ಕ್ರಿಕೇಟ್ ಲೋಕ ತ್ಯಜಿಸಿದರೂ ಧೋನಿ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಹೇಗೆ ಗೊತ್ತಾ..?
Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!