Rain : ಸೆಪ್ಟೆಂಬರ್ 18ರವರೆಗೆ ರಾಜ್ಯದ ಬಹತೇಕ ಕಡೆ ಭಾರಿ ಮಳೆ ಮುನ್ಸೂಚನೆ..!

State News : ಸೆಪ್ಟೆಂಬರ್ 18ರವರೆಗೆ ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇದೆ.

ಕಾರ್ಕಳ, ಧರ್ಮಸ್ಥಳ, ಉಡುಪಿ, ಔರಾದ್, ಮಂಗಳೂರು, ಬೆಳ್ತಂಗಡಿ, ಗೇರುಸೊಪ್ಪ, ಮಂಕಿ, ಗೋಕರ್ಣ, ಫರ್ಹತಾಬಾದ್, ಲಿಂಗನಮಕ್ಕಿ, ತಾಳಗುಪ್ಪ, ಶೃಂಗೇರಿ, ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪುತ್ತೂರು, ಕುಂದಾಪುರ, ಕೋಟ, ಕುಮಟಾ, ಕ್ಯಾಸಲ್​ರಾಕ್, ಪಣಂಬೂರು, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಬೀದರ್, ಚಿತ್ತಾಪುರ, ಅಡಕಿ, ತ್ಯಾಗರ್ತಿ, ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ಕೊಪ್ಪ, ಮಡಿಕೇರಿ ಭಾಗದಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

Cow : ಹಸುವನ್ನು ನಂಬಿ ಬದುಕುತಿದ್ದ ಕುಟುಂಬ ಬೀದಿಗೆ ಬಂದು ನಿಂತಿದೆ…!

Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

About The Author