BSY : ದೆಹಲಿಗೆ ತಲುಪಿದ ಬಿಎಸ್ ವೈ : ಮೈತ್ರಿ ಬಗ್ಗೆ ಬಿಎಸ್ ವೈ ಏನಂದ್ರು..?!

Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ ನಾವು ಚರ್ಚಿಸುವುದು ಸರಿಯಲ್ಲ.

ಇಂದಿನ ಸಭೆಯಲ್ಲಿ ಹೈಕಮಾಂಡ್ ಪ್ರಸ್ತಾಪಿಸಿದರೆ ನಾವು ನಮ್ಮ ಅಭಿಪ್ರಾಯ ಹೇಳಬಹುದು. ರಾಜ್ಯಾಧ್ಯಕ್ಷರ ಮತ್ತು ಪ್ರತಿಪಕ್ಷ ನಾಯಕರ ಆಯ್ಕೆ ಆಗಬೇಕು ಎಂಬ ಬೇಡಿಕೆ ಇದೆ. ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರವಾಗಿ ಮಾತುಕತೆ ಆಗದೆ ಪ್ರತಿಕ್ರಿಯೆ ನೀಡಲು ಇಷ್ಟಪಡಲ್ಲ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Narendra Modi : ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ : ಯತ್ನಾಳ್

Satish jarakiholi: ಬಿ.ಕೆ ಹರಿಪ್ರಸಾದ್ ಮಾತಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ..!

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

About The Author