State News : ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್ ಪಕ್ಷದೊಳಗೇ ಒಡಕು ಮೂಡಿದೆ. ಇದಕ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿರುವ ಡಿ.ಕೆ. ಶಿವಕುಮಾರ್, ವರದಿ ಸ್ವೀಕಾರಕ್ಕೂ ಮುನ್ನ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ವರದಿಯನ್ನು ಹಾಗೇ ಸ್ವೀಕಾರ ಮಾಡಿದಲ್ಲಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಾತಿ ಜನಗಣತಿ ಬಗ್ಗೆ ಈ ಹಿಂದಿನಿಂದಲೂ ಅಪಸ್ವರಗಳು ಕೇಳಿ ಬರುತ್ತಲೇ ಇವೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಮಿತಿ ರಚಿಸಿ ವರದಿಗೆ ಸೂಚಿಸಿದ್ದರು. ಆದರೆ, ಆ ವರದಿ ಮಾತ್ರ ಬಿಡುಗಡೆಯಾಗಲೇ ಇಲ್ಲ. ಮುಂದೆ ಬಂದ ಯಾವ ಸರ್ಕಾರಗಳೂ ಸಹ ಬಿಡುಗಡೆಯ ಗೋಜಿಗೆ ಹೋಗಿರಲಿಲ್ಲ. ಆದರೆ, ಈಚೆಗೆ ಸಿಎಂ ಸಿದ್ದರಾಮಯ್ಯ ತಮ್ಮ ಆಡಳಿತ ಅವಧಿ ಮುಗಿಯುವುದರೊಳಗೆ ಜಾತಿ ಜನಗಣತಿ ವರದಿ ಸ್ವೀಕಾರ ಮಾಡಿಯೇ ಸಿದ್ಧ ಎಂದು ಹೇಳಿದ್ದರು. ಸಿದ್ದರಾಮಯ್ಯ ಈ ಹೇಳಿಕೆ ನೀಡುತ್ತಿದ್ದಂತೆ ಕೆಲವೊಂದು ಸಮುದಾಯಗಳಿಂದ ಅಪಸ್ವರಗಳು ಕೇಳಿ ಬಂದಿದ್ದವು. ಈ ವರದಿಯನ್ನು ಯಥಾವತ್ ಸ್ವೀಕಾರ ಮಾಡಿದರೆ ತಮ್ಮ ತಮ್ಮ ಸುಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂದು ಅಸಮಾಧಾನಗೊಂಡಿದ್ದವು. ಈಗ ಆ ಅಸಮಾಧಾನವು ಡಿ.ಕೆ. ಶಿವಕುಮಾರ್ ಮೂಲಕ ವ್ಯಕ್ತವಾಗಿದೆ.
ಸಿಎಂಗೆ ಪತ್ರ ಬರೆದಿದ್ದೇಕೆ?
ಕಾಂತರಾಜ್ ನೇತೃತ್ವದ ಸಮಿತಿಯ ವರದಿ ತಿರಸ್ಕರಿಸುವಂತೆ, ಒಕ್ಕಲಿಗರಿಗೆ 3A ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಡಿ.ಕೆ. ಶಿವಕುಮಾರ್ಗೆ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಮನವಿ ಮಾಡಿತ್ತು. ಹೋರಾಟ ಸಮಿತಿಯ ಮನವಿಯಂತೆ ಸಿಎಂಗೆ ಡಿ.ಕೆ. ಶಿವಕುಮಾರ್ ಈ ಪತ್ರವನ್ನು ಬರೆದಿದ್ದಾರೆ.
KIMS Hospital: ಆಸ್ಪತ್ರೆಯಲ್ಲಿ ಮಕ್ಕಳನ್ನು ಅದಲು ಬದಲು ಮಾಡಿದ ಸಿಬ್ಬಂದಿಗಳು..!
Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!