Friday, June 20, 2025

Latest Posts

ಹುಬ್ಬಳ್ಳಿ : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ

- Advertisement -

Hubballi News : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ 13 ರಂದು ಪಂಚಮಸಾಲಿ 2A ಮೀಸಲಾತಿ ೬ನೇ ಹಂತದ ಸಮಾವೇಶ ನಡೆಯಲಿದೆ. ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ.

ಈಗಾಗಲೇ ಬೆಳಗಾವಿ‌ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಈಗ ಧಾರವಾಡ ಜಿಲ್ಲೆಯ ಸಮಾವೇಶ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಮೈದಾನದಲ್ಲಿ ನಡೆಯಲಿದೆ. 2A ಮೀಸಲಾತಿ, ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಓಬಿಸಿ ದರ್ಜೆ , ವಿವಿಧ ಬೇಡಿಕೆಗಳನ್ನು ಇಟ್ಟು ಹೋರಾಟ ಆರಂಭ ಮಾಡಲಾಗಿದೆ.

ಸಮಾವೇಶ ನಡೆಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆಗೆ ಸಲ್ಲಿಸಲಿದ್ದಾರೆ ಸ್ವಾಮೀಜಿ. 2A ಮೀಸಲಾತಿ, ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಓಬಿಸಿ ದರ್ಜೆ ನೀಡಲು ಮೂರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ಸರ್ಕಾರ ಕೊನೆಯ ಗಳಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಯಿತು. ಚುನಾವಣೆ ಘೋಷಣೆ, ನೀತಿ ಸಂಹಿತೆಯಿಂದ ಮೀಸಲಾತಿ ಜಾರಿ ಆಗಲಿಲ್ಲ. ಕಾನೂನು ತೊಡಕು ಆಯಿತು, ಈಗಿನ ಸರ್ಕಾರಕ್ಕೆ ಸಹ ನಾವು ಕೇಳತಾ ಇದ್ದೇವೆ ನಮ್ಮ ಹಕ್ಕು ಕೊಡಿ ಅಂತಾ ಹೋರಾಟದ ಮೂಲಕ ನಮ್ಮ ಮೀಸಲಾತಿ ಪಡದೇ ತೀರುತ್ತೇವೆ . ಸರ್ಕಾರ ನಮ್ಮನ್ನ ಕರೆದು ಮಾತುಕತೆಗೆ ಕರೆಯಬೇಕು ಎಂದು ಹೇಳಿದರು.

ಲಿಂಗಾಯತರ ಕಡೆಗಣನೆ ವಿಚಾರಕ್ಕೆ ಸ್ವಾಮೀಜಿ ಪ್ರತಿಕ್ರಿಯೆ:
ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರನ್ನ, ಲಿಂಗಾಯತ ಅಧಿಕಾರಿಗಳಿಗಳನ್ನ ಕಡೆಗಣಿಸಲಾಗುತಿದೆ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು ಶಾಮನೂರು ಶಿವಶಂಕರಪ್ಪನವರು ಹೇಳಿದರಲ್ಲಿ ಮಾಹಿತಿ ಇದೆ. ಅವರು ವೀರಶೈವ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷರು, ಲಿಂಗಾಯತ ಅಧಿಕಾರಿಗಳು ಅವರಿಗೆ ಹೇಳಿರಬಹುದು, ಶಾಮನೂರು ಶಿವಶಂಕರಪ್ಪನವರು ಹಿರಿಯರು ಅವರ ಬಳಿ ಲಿಂಗಾಯತ ಅಧಿಕಾರಿಗಳು ಅನ್ಯಾಯದ ಬಗ್ಗೆ ಮಾತನಾಡಿರಬಹುದು. ನನ್ನ ಬಳಿಯೂ ಕೇಲ ಲಿಂಗಾಯತ ಅಧಿಕಾರಿಗಳು ಹೇಳಿದರು.

ಆದರೆ ನಾನು ಸಮಾಜದ ಗುರುಗಳು ಆಗಿದ್ದರಿಂದ ಏನು ಮಾತಾಡಿಲ್ಲ. ಆಡಳಿತಾತ್ಮಕ ವಿಷಯದಲ್ಲಿ ಕೈ ಹಾಕಬಾರದು ಎನ್ನುವ ಕಾರಣಕ್ಕೆ ಏನು ಮಾತಾಡಿಲ್ಲ. ಕೂಡಲೇ ಮುಖ್ಯಮಂತ್ರಿಗಳು ಶಾಮನೂರು ಶಿವಶಂಕರಪ್ಪನವರ ಜೊತೆಗೆ ಮಾತನಾಡಬೇಕು. ಯಾವುದೇ ತಪ್ಪು ಸಂದೇಶ ಹೋಗಬಾರದು. ಲಿಂಗಾಯತ ಸಮಾಜದ ಅಧಿಕಾರಿಗಳು ದಕ್ಷ ಹಾಗೂ ಸಮರ್ಥರೂ ಇದ್ದಾರೆ . ಅಂತ ಅಧಿಕಾರಿಗಳಿಗೆ ಸೂಕ್ತ ಸ್ಥಾನ ಮಾನ ಕೊಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಸ್ವಾಮೀಜಿ ಹೇಳಿದರು.

Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್

Center for Drought Studies : ಗದಗ : ಗ್ರಾಮಗಳಿಗೆ ಕೇಂದ್ರ ಬರ ಅಧ್ಯಯನ ಕೇಂದ್ರ ಭೇಟಿ

Farmer : ಅನ್ನ ಹಾಕುವ ಕೈಯಲ್ಲಿಗ ನೇಣಿನ ಹಗ್ಗ: ಹೆಚ್ಚಿದ ರೈತರ ಆತ್ಮಹತ್ಯೆಯ ಪ್ರಕರಣಗಳು..!

- Advertisement -

Latest Posts

Don't Miss