Friday, March 14, 2025

Latest Posts

ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!

- Advertisement -

ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು ಯಾವ ಜಾತಿ ಸಮೀಕ್ಷೆ ಅನ್ನೋ ಸ್ಪಷ್ಟತೆ ಇಲ್ಲ. ಸರ್ಕಾರ ಅದರ ಬಗ್ಗೆ ಮೊದಲು ಸ್ಪಷ್ಟತೆ ಕೊಡಲಿ ಎಂದು ಬೊಮ್ಮಾಯಿ ಹೇಳಿದರು.

ವರದಿ ಆಧಾರದ ಮೇಲೆ ಸಾದಕ ಬಾದಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್ಸಿನ ನಾಯಕರು ಹೇಳಿದ್ದಾರೆ.ಈ ಸಮೀಕ್ಷೆಯ ಫಲಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತೆ,ಅದರ ಫಲಿತಾಂಶ ಏನಾಗುತ್ತೆ. ಕೆಲವರ್ಗದಲ್ಲಿ ಅಸಮಾಧಾನ ಉಂಟಾಗುತ್ತಾ ? ಈ ಬಗ್ಗೆ ಮೊದಲು ಚರ್ಚೆಯಾಗಲಿ. CWC ಅದರ ಬಗ್ಗೆ ನಿರ್ಣಯ ತೆಗೆದುಕೊಂಡಿದೆ ಅವರು ಮಾಡಲಿ ಅದು ಅವರ ಕೆಲಸ.

ಇಸ್ರೇಲ್ ಪ್ಯಾಲೆಸ್ಟಿನ್ ಯುದ್ಧ ಹಿನ್ನೆಲೆ ಕಾಂಗ್ರೆಸ್ ಪ್ಯಾಲೆಸ್ಟಿನ್ ಬೆಂಬಲ ವಿಚಾರ

ಇದೊಂದು ಅಂತರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ಟೈನ್ ಹಮಾಸರು ಉಗ್ರವಾದಿಗಳು, ಅವರು ಪ್ಯಾಲೆಸ್ಟೈನ್ ನಾಗರೀಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಪ್ಯಾಲೆಸ್ಟೈನ್ ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡ್ತಾ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ, ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನ ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿತಾ ಇದೆ, ಇದು ದೊಡ್ಡ ದುರಂತ.

ನರಗುಂದ ಸೇರಿದಂತೆ ಕೆಲ ಕ್ಷೇತ್ರಗಳ ಹಿಂದಿನ ಕಾಮಗಾರಿಗಳಿಗೆ ಸಿಎಂ ಶಿಫಾರಸ್ಸು ವಿಚಾರ

ನರಗುಂದ ಸೇರಿದಂತೆ ಯಾವುದೇ ಕ್ಷೇತ್ರವಾಗಲಿ, ಕಾಮಗಾರಿಗಳ ತನಿಖೆ ಮಾಡಲಿ.ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ ಎಲ್ಲ ಇಲಾಖೆ ತನಿಖೆಯಾಗಲಿ, ಬೇಡ ಅಂದವರು ಯಾರು. ಕಾಮಗಾರಿ ಎಲ್ಲವೂ ಮುಗಿದಿದೆ, ಬಿಲ್ ಗಳನ್ನು ಸಹ ಕೊಡಲಾಗಿದೆ.

ಆದ್ರೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿನ ಕಾಮಗಾರಿಗಳ ಬಿಲ್ಲನ್ನು ಸರ್ಕಾರ ಇನ್ನೂ ಕೊಟ್ಟಿಲ್ಲ. ಮೊದಲು ಬಿಲ್ಲುಗಳನ್ನು ಕೊಡಲಿ, ನಂತರ ಎಲ್ಲೆಲ್ಲಿ ತಪ್ಪುಗಳು ನಡೆದಿದೆ ಇದರ ಬಗ್ಗೆ ತನಿಖೆಯಾಗಲಿ.ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ, ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರಕ್ಕೆ ತೋರಿಸುತ್ತಾರೆ.

ಈಗ ವಿದ್ಯುತ್ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲುಗಳನ್ನು ಒದಗಿಸಿ. ವಿದ್ಯುತ್ ಉತ್ಪಾದನೆ ಮಾಡಿದರೆ ಈ ಸಮಸ್ಯೆ ಬರ್ತಿರ್ಲಿಲ್ಲ. ತಮ್ಮ ಹಣಕಾಸಿನ ದುಸ್ಥಿತಿಗೆ ಅಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆ. ಸರಿಯಾದ ವಿದ್ಯುತ್ತನ್ನು ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಎಲ್ಲ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು, ಮಾಡುತ್ತದೆ.

ಮಾಜಿ ಸಚಿವ ವಿ ಸೋಮಣ್ಣ ಹೆಸರು ಪ್ರಸ್ತಾಪಿಸುತ್ತಲೇ ಧನ್ಯವಾದಗಳು ಎಂದು ಹೊರಟು ಹೋದ ಬೊಮ್ಮಾಯಿ.

ಆಂಗ್ಲ ಭಾಷೆಯಲ್ಲಿ ಏಳು ಸಾವಿರ ವ್ಯಾಕರಣ ಬರೆದ ಗ್ರಾಮೀಣ ಪ್ರತಿಭೆ .!

ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೇಟಿಗ ಕೆ.ಎಲ್.ರಾಹುಲ್

ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!

- Advertisement -

Latest Posts

Don't Miss