ಟೆಲಿಕಾಂ ಅಧಿಕಾರಿಗಳ ಹೆಸರಲ್ಲಿ ಧೋಖಾ

Hubballi News: ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ 6.10 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ ಪಡೆಯಲು ಸ್ಕೈಪ್ ಆ್ಯಪ್‌ನಲ್ಲಿ ವಿಡಿಯೋ ಕಾಲ್ ಮಾಡಿ ಠಾಣೆ ತೋರಿಸಿದರು. ನಿಮ್ಮ ಖಾತೆಯಲ್ಲಿರುವ ಹಣವನ್ನು ಆರ್‌ಬಿಐಗೆ ವರ್ಗಾವಣೆ ಮಾಡಬೇಕು. ನೀವು ತಪ್ಪಿತಸ್ಥರು ಅಲ್ಲದಿದ್ದರೆ ನಿಮ್ಮ ಹಣ ಮರಳಿ ನೀಡಲಾಗುವುದು ಎಂದು ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ರವಿ ಅವರು ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’

About The Author