‘ಕಾಂಗ್ರೆಸ್‌ನಲ್ಲಿ ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’

Political News: ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್ ಸಿಗುತ್ತಿಲ್ಲ. ವಿಪರೀತವಾದ ಒಳಜಗಳದಿಂದ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಎರಡು ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ ಆಗುತ್ತದೆ. ರಾಷ್ಟ್ರ ನಾಯಕರ ಜೊತೆ ಚರ್ಚಿಸಿ ಸದ್ಯದಲ್ಲಿಯೇ ಎರಡೂ ಸದನಗಳ ವಿಪಕ್ಷ ನಾಯಕರನ್ನು ಆಯ್ಕೆ ಮಾಡುತ್ತೇವೆ. ಸರ್ಕಾರದ ನಿಷ್ಕ್ರಿಯತೆ, ವೈಫಲ್ಯದ ವಿರುದ್ಧ ಹೋರಾಡುತ್ತೇವೆ ಎಂದರು.

ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಒಂದು ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರವಿದೆಯೆಂದು ಅವರದ್ದೇ ಪಕ್ಷದ ಶಾಸಕರು ಹೇಳಿದ್ದಾರೆ. ಆರು ತಿಂಗಳಲ್ಲಿ ಈ ಪ್ರಮಾಣದ ಆಡಳಿತ ವಿರೋಧಿ ಅಲೆ ನಿರ್ಮಾಣವಾಗುತ್ತದೆ ಎಂದು ನಾವು ಕೂಡ ಅಂದುಕೊಂಡಿರಲಿಲ್ಲ. ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿ ಎಂದು ನಾನು ಕಾಂಗ್ರೆಸ್‌ನವರಿಗೆ ಆಗ್ರಹಿಸುತ್ತೇನೆ ಎಂದು ಅವರು ಹೇಳಿದರು.

ಅಕ್ರಮ ಚಟುವಟಿಕೆ ನಡೆಸುವವರಿಗೆ ಕುಮ್ಮಕ್ಕು ಕೊಟ್ಟಿಲ್ಲ- ಸಚಿವ ಜೋಶಿ

ಯಾವುದೇ ರೀತಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವ ಪ್ರಶ್ನೆಯೇ ಇಲ್ಲ. ನರೇಂದ್ರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಯಾರೇ ಆಗಿದ್ದರೂ ಅಕ್ರಮ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರೇ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಅಂದು ಕೂಡ ಸ್ಪಷ್ಟ ಪಡಿಸಿದ್ದೇನೆ. ಇಂದು ಕೂಡ ಹೇಳುತ್ತಿದ್ದೇನೆ. ಯಾರೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೇ ಸೂಕ್ತ ಕ್ರಮ ಜರುಗಿಸಿ ಎಂದರು.

ನರೇಂದ್ರ ಗ್ರಾಮದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿರುವುದು ನಿಜಕ್ಕೂ ಖಂಡನೀಯವಾಗಿದೆ. ಈ ಬಗ್ಗೆ ಪೊಲೀಸರು ತಪ್ಪಿತಸ್ಥರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿ ಎಂದು ಅವರು ಹೇಳಿದರು.

ಮೇಲೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ: ಸಿಎಂ ವಿರುದ್ಧ ಮಾಜಿ ಸಿಎಂ ವ್ಯಂಗ್ಯ ..!

ಅಂದರ್- ಬಾಹರ್‌ ಆಡುತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಅಂದರ್..

ಲೋಕಸಭೆಗೆ ನಾನೂ ಆಕಾಂಕ್ಷಿ: ಬಸವರಾಜ ಗುರಿಕಾರ

About The Author