Thursday, June 19, 2025

Latest Posts

‘ಮರಿ ಖರ್ಗೆ’ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ : ಕಟೀಲ್ ವಾಗ್ದಾಳಿ

- Advertisement -

Mangaluru News: ಮಂಗಳೂರು : ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‍ ಪಕ್ಷದ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ (ಪ್ರಿಯಾಂಕ್ ಖರ್ಗೆ) ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ ಎಂದು ಕಟೀಲ್ ವ್ಯಂಗ್ಯವಾಡಿದ್ದಾರೆ.

ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ

ಎಚ್‌ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ

ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್

- Advertisement -

Latest Posts

Don't Miss