Friday, June 20, 2025

Latest Posts

ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ :ಸಚಿವ ಪ್ರೀಯಾಂಕ್ ಖರ್ಗೆ

- Advertisement -

Hubballi Political News: ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಇರೋದು ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ,ಕುರಾನ್ ಮೇಲೆ ಅಲ್ಲ,ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಅನ್ನಲಿ ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ ಎಂದು ಸಚಿವ ಪ್ರೀಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ಕಾರಗಳು ನಡೆಯೋದು ಸಂವಿಧಾನ ಮೇಲೆ,
ಬಸವ ತತ್ವ, ಅಂಬೇಡ್ಕರ್ ತತ್ವ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದೂತ್ವದ ಮೇಲೆ ನಡೀತಿತ್ತು. ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್.ಎಸ್.ಎಸ್ ನವರು ಎಂದಿದ್ರು. ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ ಎಂದರು.

ಯತ್ನಾಳ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು. ವಿಜಯೇಂದ್ರ ಇವಾಗ ಯತೀಂದ್ರ ಮೇಲೆ ಶ್ಯಾಡೋ ಸಿಎಮ್ ಅಂತಾ ಆರೋಪ ಮಾಡಿದ್ರು. ಕಳೆದ ಸರ್ಕಾರದಲ್ಲಿ ಶ್ಯಾಡೋ ಸಿಎಮ್ ಯಾರಿದ್ರು ಎಂದ ಖರ್ಗೆ, ಯತ್ನಾಳ ದಾಖಲೆ ಬಿಡುಗಡೆ ಮಾಡ್ತೀವಿ ಅಂತಾರೆ. ಯತ್ನಾಳ ಅವರಲ್ಲಿ ನಾನು ಕರ್ನಾಟಕ ಜನರ ಪರ ಮನವಿ ಮಾಡ್ತೀನಿ. ನೀವು ದಾಖಲೆ ಕೊಡಿ, ನೀವು ಪ್ರಮಾಣಿಕರು ಅಂತಾ ಗೊತ್ತಿದೆ. ಯಾವದೇ ದಾಖಲೆ ಇದ್ರೆ ನಾವು ಜಸ್ಟೀಸ್ ಮೈಕಲ್ ಕುನೋ ಅವರ ಸಮಿತಿ ಇದೆ. ಅವರಿಗೆ ದಾಖಲೆ ಕೊಡಿ ಎಂದು ಅವರು ಹೇಳಿದರು.

40 ಸಾವಿರ ಕೋಟಿ ಹಗರಣ ಇದೆ, ಹೆಣದ ಮೇಲೆ ಹಣ ಮಾಡಿದ್ದಾರೆ ಎಂದ್ರೆ ಮನುಷ್ಯತ್ವ ಅಲ್ಲ. ಇದು ಕಾಂಗ್ರೆಸ್ ನಾಯಕರ ಆರೋಪ ಅಲ್ಲ. ಮಾಜಿ ಕೇಂದ್ರ ಸಚಿವ ಹಾಲಿ ಶಾಸಕರ ಆರೋಪ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉತ್ತರ ಕೊಡಬೇಕು. ಕೋವಿಡ್ ಭ್ರಷ್ಟಾಚಾರದಲ್ಲಿ ಕೇಂದ್ರಕ್ಕೂ ಪಾಲು ಹೋಗಿರಬಹುದು. 40 ಪರ್ಸೆಂಟ್ ಸರ್ಕಾರ ಬಿರುದು ಬಂದಿರೋದು ಬಿಜೆಪಿಯವರಿಂದ. ಕೇಂದ್ರ ನಾಯಕರು,ರಾಜ್ಯ ನಾಯಕರಿಗೂ ಪಾಲ ಹೋಗಿದೆ ಎಂದು ಅವರು ಹೇಳಿದರು.

ಬ್ರಿಟಿಷರ ಬೂಟು ನೆಕ್ಕೋರು ಅನ್ನೋ ಹರಿಪ್ರಸಾದ್‌ ಹೇಳಿಕೆಗೆ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಅದರಲ್ಲಿ ತಪ್ಪೇನಿದೆ. ಪರೋಕ್ಷವಾಗಿ ಹರಿಪ್ರಸಾದ್‌ ಮಾತಿಗೆ ಧ್ವನಿಗೂಡಿಸಿದ ಖರ್ಗೆ‌‌, ಕ್ಷಮಾ ಪತ್ರ ಬರೆದಿದ್ದು ಯಾರೂ ,ಬ್ರಿಟಿಷರ ಬಳಿ ಪೆನ್ಶನ್ ತಗೊಂಡಿದ್ದು ಯಾರೂ…? ಬಿಜೆಪಿ ಮತ್ತು RSS ಗೆ ಸ್ವಂತ ಇತಿಹಾಸ ಇಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಇಲ್ಲ.

ಅವರು ಸೃಷ್ಟಿಸಬೇಕಾಗಿದೆ,ಹಾಗಾಗಿ ವಾಟ್ಸಪ್ ಯುನಿವರ್ಸಿಟಿಯಲ್ಲಿ ಸುಳ್ಳು ಹಬ್ಬಸ್ತಾರೆ. ಅದನ್ನೆ ಯುವಕರು ನಂಬತಾರೆ ಎಂದು ಸಚಿವ ಪ್ರೀಯಾಂಕ್ ಖರ್ಗೆ ಲೇವಡಿ ಮಾಡಿದರು.

‘ಶಿವಾನಂದ ಪಾಟೀಲ್ ರೈತರ ಬಗ್ಗೆ ದುರುದ್ದೇಶದಿಂದ ಮಾತನಾಡಿಲ್ಲ, ಸಲುಗೆಯಿಂದ ಮಾತನಾಡಿದ್ದಾರೆ’

‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’

‘ನಮ್ಮ ಆರೋಪಕ್ಕೆ ಬಸನಗೌಡ ಪಾಟೀಲ್ ಯತ್ನಾಳರೇ ಸಾಕ್ಷಿ ಒದಗಿಸಿದ್ದಾರೆ’

- Advertisement -

Latest Posts

Don't Miss