‘ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ, ನ್ಯಾಯಾಧೀಶರಿಗೆ ಧನ್ಯವಾದಗಳು’

Political News: ಸಂಸದ ಪ್ರತಾಪ್ ಸಿಂಹ ಅವರ ಸೋಹದರ ವಿಕ್ರಮ್ ಸಿಂಹ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ ಕೇಸ್‌ಗೆ ಸಂಬಂಧಿಸಿದಂತೆ, ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದಾರೆ.

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಹಾಗು ಕರೆ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ಮತ್ತು ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ಪ್ರತಾಪ್ ಟ್ವೀಟ್ ಮಾಡಿದ್ದಾರೆ.

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

About The Author