Friday, June 20, 2025

Latest Posts

ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್

- Advertisement -

Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ.

ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಮೂವತ್ತು ವರ್ಷ ಹಿಂದಿನ ಪ್ರಕರಣದಲ್ಲಿ ಹುಬ್ಬಳ್ಳಿಯ ಕರಸೇವಕರ ಬಂಧನದಿಂದ ಸಾಬೀತಾಗಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಇಡಿ ರಾಷ್ಟ್ರವೇ ಸಂಭ್ರಮಿಸುತ್ತಿರುವಾಗ ನೀವು ಹಿಂದು‌ ಕಾರ್ಯಕರ್ತರನ್ನು ಹತ್ತಿಕ್ಕಿ ಮಂಗಳ ಕಾರ್ಯದಲ್ಲಿ ಅಪಶಕುನ ಸೃಷ್ಟಿಸುತ್ತಿದ್ದೀರಿ.

100 ದೇವಾಲಯಗಳಿಗೆ ತಲಾ 100 ಕೋಟಿ ಅನುದಾನವನ್ನು ಮುಂದಿನ 3 ವರ್ಷಗಳಲ್ಲಿ ಕೊಡುವ ಪ್ರಯತ್ನವನ್ನು ಈ ಸರಕಾರ ಮಾಡಲಿ.

ಕುಟುಂಬಸ್ಥರ ಮದುವೆಗೆ ಆಹ್ವಾನ ಕೊಟ್ಟಿಲ್ಲ ಎಂದು ಕೆಲವರು ನೀಡುವ ಪಿಳ್ಳೆನೆವವನ್ನು ರಾಷ್ಟ್ರಮಟ್ಟದ ಈ ಕಾರ್ಯಕ್ರಮಕ್ಕೆನೀಡಬೇಡಿ. ಹಿಂದುತ್ವದ ಬಗ್ಗೆ ನೈಜ ಕಳಕಳಿ ಇದ್ದರೆ ಚುನಾವಣೆಯ ಹಿಂದೂ ಆಗದೆ, ನೈಜ ಹಿಂದೂ ಎಂದು ಪ್ರಕಟ ಮಾಡಬೇಕಿದ್ದರೆ 22ರಂದು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಿಸಲು ಸೂಚಿಸಿ.

ಸಿದ್ದರಾನಯ್ಯನವರೇ ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ರಾಜ್ಯದ ಎಲ್ಲ ರಾಮ ಕರಸೇವಕರನ್ನು ಬಂಧನ ಮಾಡಿ ನೋಡಿ. ನನ್ನನ್ನು ಸೇರಿ ರಾಜ್ಯದ ಎಲ್ಲ ಕರಸೇವಕರ ಪಟ್ಟಿಯನ್ನು ಕೊಡುವೆ. ಇನ್ನೂ ಕಾಲ ಮಿಂಚಿಲ್ಲ; ಆಹ್ವಾನ ಕೊಟ್ಟಿಲ್ಲ; ನೋಡೋಣ ಬರೋಣ ಎಂಬ ಮಾತನ್ನು ಬಿಟ್ಟು ಬಿಡಿ. ಯಾವುದೋ ಸ್ನೇಹಿತರ,

ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..

‘ಹುಬ್ಬಳ್ಳಿಯ ರಾಮ ಜನ್ಮಭೂಮಿ ಹೋರಾಟ ಬಂಧನ ಮತ್ತು ಅಯೋಧ್ಯೆಗೂ ಯಾವುದೇ ಸಂಬಂಧವಿಲ್ಲ’

‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

- Advertisement -

Latest Posts

Don't Miss