Political News: ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವೂ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದಿದ್ದಾರೆ.
|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ. ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
|| ಜೈ ಶ್ರೀರಾಮ್ ||
ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ @narendramodi ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ… pic.twitter.com/dQEpBWjnC8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 22, 2024
ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ