Sports News: ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಆಫ್ರಿಕಾದ ಕ್ರಿಕೇಟಿಗ ಕೇಶವ್ ಮಹಾರಾಜ್ ಮೈದಾನಕ್ಕೆ ಬಂದಾಗ, ರಾಮ್ ಸೀಯಾ ರಾಮ್ ಹಾಡು ಹಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಏಕೆಂದರೆ ಅವರಿಗೆ ರಾಮನ ಭಜನೆ ಎಂದರೆ ಭಾರೀ ಪ್ರೀತಿ ಎಂದು ಅವರೇ ಹೇಳಿದ್ದರು. ಇದೀಗ, ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಕೇಶವ್ ಮಹಾರಾಜ್ ವೀಡಿಯೋ ಮಾಡಿ, ವಿಶ್ ಮಾಡಿದ್ದಾರೆ.
ಈ ವೀಡಿಯೋದಲ್ಲಿ ಕೇಶವ್, ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಹಿಂದೂಗಳಿಗೆ ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಂತಿ, ಸದ್ಭಾವನೆ, ಆಧ್ಯಾತ್ಮಿಕ ಜಾಗೃತಿ ಮೂಡಲಿ ಎಂದು ಕೇಶವ್ ಹೇಳಿದ್ದಾರೆ.
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು, ಚಿತ್ರತಾರೆಯರು, ಕ್ರಿಕೇಟ್ ತಾರೆಯರಿಗೂ ಆಹ್ವಾನ ಸಿಕ್ಕಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ ಈಗಾಗಲೇ ಅಯೋಧ್ಯೆಗೆ ಹೋಗಿದ್ದಾರೆ. ಹರ್ಭಜನ್ ಸಿಂಗ್ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದ್ದರು.
Looking forward to the opening of the Ram Mandir in Ayodhya. May it bring peace and enlightenment to one and all. 🙏 @MaheshIFS pic.twitter.com/P8TGT8tteX
— Keshav Maharaj (@keshavmaharaj16) January 21, 2024
ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್
ಖ್ಯಾತ ಫುಟ್ಬಾಲ್ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’