Belagavi News:: ಕಾಗವಾಡ: ಶಿರಗುಪ್ಪಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ್ದಾರೆ.
ಕಾರ್ಯಕ್ರಮ ನಡೆಸಲು ಯಾವುದೇ ಅನುಮತಿ ಸಹ ಪಡೆದುಕೊಂಡಿಲ್ಲ. ಭಾನುವಾರದ ದಿನ ಇಲ್ಲಿ ಕಾರ್ಯಕ್ರಮ ನಡೆದಿದ್ದು, ತಮಗೆ ಬೇಕಾದವರಿಗೆ ಮಾತ್ರ, ಯಾವ ಕಾರ್ಯಕ್ರಮ ಇದ್ದರೂ, ಇಲ್ಲಿನ ಅಧ್ಯಕ್ಷರು ಕಾರ್ಯಕ್ರಮಕ್ಕೆ ಅನುಮತಿ ಕೊಡುತ್ತಾರೆಂದು ಹಲವರು ಕಿಡಿಕಾರಿದ್ದಾರೆ.
ಇನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ಮೌಕಿಕ ಆದೇಶದ ಮೆರೇಗೆ ಅಭಿವೃದ್ಧಿ ಅಧಿಕಾರಿಗಳು ಪರ್ಮಿಷನ್ ಕೊಟ್ಟಿದ್ದಾರೆ. ಅಧ್ಯಕ್ಷರ ಮೌಕಿಕ ಆದೇಶದ ಮೇರೆಗೆ ಸಿಬ್ಬಂದಿ ಬಾಗಿಲು ತೆಗೆದುಕೊಟ್ಟಿದ್ದಾರೆ. ಇದಕ್ಕೆ ಹಲವರು ಆಕ್ರೋಶ ಹೊರಹಾಕಿದ್ದು, ಅಧ್ಯಕ್ಷರ ಒಪ್ಪಿಗೆ ಸಿಕ್ಕಿದ್ರೆ, ಇಲ್ಲಿ ಮದುವೆ ಮುಂಜಿನೂ ನಡೆಸ್ತಾರೇನೋ ಎಂದು ಕಿಡಿಕಾರಿದ್ದಾರೆ.
‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’
ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ




