‘ಸಿಬಿಐ, ಐಟಿ, ಇಡಿಗಳು ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ’

Political News: ವಿಪಕ್ಷ ನಾಯಕರ ಮೇಲೆ ಇಡಿ ದಾಳಿ ನಡೆಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಇದಕ್ಕೆಲ್ಲ ಕಾರಣ ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ

ಹೊಸದಾಗಿ ಸಂಸಾರ ಆರಂಭಿಸಲು ಇಬ್ಬರು ಮಕ್ಕಳನ್ನು ಕೊಂದ ದಂಪತಿ

ಆನ್‌ಲೈನ್‌ನಲ್ಲಿ ಎಮ್ಮೆ ಆರ್ಡರ್ ಹಾಕಿದ ಭೂಪ: ಮುಂದೇನಾಯ್ತು..?

About The Author