Thursday, October 23, 2025

Latest Posts

‘ಕರ್ನಾಟಕದಲ್ಲಿ ಕಾಂಗ್ರೆಸ್ ತಂದ ಯೋಜನೆ ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು’

- Advertisement -

Political News: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್’ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಗರು ನಮ್ಮ ಗ್ಯಾರಂಟಿ ಯೋಜನೆ ನೋಡಿಯಾದರೂ, ತಾವು ಬಜೆಟ್ ಮಂಡಿಸಬೇಕಿತ್ತು ಎಂದು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್’ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್​ನಿಂದ ನಮಗೆ ಬಹಳ ನಿರಾಸೆಯಾಗಿದೆ. ಇದರ ಬಗ್ಗೆ ಹೋರಾಟ ಮಾಡುವ ಕುರಿತು ನಿರ್ಧಾರ ಮಾಡುತ್ತೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಜನರಿಗೆ ಏನು ಕೊಡುತ್ತೇವೆ ಎಂಬ ದಿಕ್ಸೂಚಿಯನ್ನಾದರೂ ಹೇಳಬೇಕಿತ್ತು. ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಎಲ್ಲವೂ ಹುಸಿಯಾಗಿದೆ. ಬಿಜೆಪಿ ಸಂಸದರು ಈ ಕುರಿತು ಪ್ರಶ್ನೆ ಮಾಡಿ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ತಂದಿರುವ ಜನಪರ ಯೋಜನೆಗಳನ್ನು ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು. ಈಗಾಗಲೇ ದೇಶವನ್ನು ಸಾಲದ ಸುಳಿಗೆ ಸಿಲುಕಿಸಿರುವ ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸುವುದರಲ್ಲಿ ಸಂದೇಹವಿಲ್ಲ ಎಂದ ಡಿಕೆಶಿ ಹೇಳಿದ್ದಾರೆ.

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ

- Advertisement -

Latest Posts

Don't Miss