Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ 50 ಸಂಜೀವಿನಿ ಹೆಸರಿನ ಕೆಫೆ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಈ ಕೆಫೆಯಲ್ಲಿ ಆರೋಗ್ಯಕರ, ಶುಚಿ ರುಚಿಯಾದ ಆಹಾರವನ್ನು ತಯಾರಿಸಲು ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು ಎಂದಿದ್ದಾರೆ.
7.50 ಕೋಟಿ ರೂಪಾಯಿ ಕೆಫೆ ಸಂಜೀವಿನ ಸ್ಥಾಪಿಸಲು ಮೀಸಲಿಡಲಾಗಿದ್ದು, ಇಂದಿರಾ ಕ್ಯಾಂಟೀನ್ ಜೊತೆಗೆ ಕೆಫೆ ಸಂಜೀೀವಿನಿಯಲ್ಲಿಯೂ ಜನರಿಗೆ ಕೈಗೆಟಕುವ ದರಕ್ಕೆ ಆಹಾರ ಮಾರಾಟ ಮಾಡಲಾಗುತ್ತದೆ.
ಇನ್ನು ಮೊನ್ನೆಯಷ್ಟೇ ದಾವಣಗೆರೆಯಲ್ಲಿ ನಡೆದಿದ್ದ ಪತ್ರಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಗ್ರಾಮೀಣ ಪತ್ರಕರ್ತರಿಗೆ ಫ್ರೀ ಬಸ್ಪಾಸ್ ನೀಡುವುದಾಗಿ ಹೇಳಿದ್ದರು. ಅದೇ ರೀತಿ ಇಂದು ಬಜೆಟ್ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ ಜಿಲ್ಲಾಪತ್ರಕರ್ತರಿಗೆ ಅನುಕೂಲವಾಗಲಿದೆ.
ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು
ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ
ಪತ್ನಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದಕ್ಕೆ, ಪತಿ ಆತ್ಮಹತ್ಯೆಗೆ ಶರಣು..!




