Movie News: ದರ್ಶನ್ ತೂಗುದೀಪ್ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮನೆಯ ಬಳಿ ಬಂದು, ಗಲಾಟೆ ಮಾಡಬಾರದು. ಶಾಂತ ರೀತಿಯಲ್ಲಿ ಸಹಕರಿಸಬೇಕು ಎಂದು ಕೋರಿದ್ದರು. ಅದೇ ರೀತಿ ದರ್ಶನ್ ಅಭಿಮಾನಿಗಳು ಮನೆಯ ಬಳಿ ಬಂದು, ಶಾಂತ ರೀತಿಯಿಂದಲೇ, ದರ್ಶನ್ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವನ್ನು ಪೊಲೀಸರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.
ಈ ಕಾರಣಕ್ಕ ಟ್ವೀಟ್ ಮಾಡಿ ದರ್ಶನ್ ಧನ್ಯವಾದ ತಿಳಿಸಿದ್ದಾರೆ. ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು. ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ ಎಂದು ದರ್ಶನ್ ಬರೆದುಕೊಂಡಿದ್ದಾರೆ.
ಈ ಮೊದಲು ದರ್ಶನ್ ಹುಟ್ಟುಹಬ್ಬಕ್ಕೆ ಶುಭಕೋರಲು ಬರುತ್ತಿದ್ದ ಅಭಿಮಾಾನಿಗಳು, ಅಕ್ಕಪಕ್ಕದ ಮನೆಯವರಿಗೆ ತೊಂದರೆಯಾಗುವಂತೆ ನಡೆದುಕೊಂಡಿದ್ದರು. ಈ ಬಗ್ಗೆ ದರ್ಶನ್ ಅಕ್ಕಪಕ್ಕದ ಮನೆಯವರು ದೂರು ಕೂಡ ನೀಡಿದ್ದರು. ಆಗಿನಿಂದ ದರ್ಶನ್ ತಮ್ಮ ಅಭಿಮಾನಿಗಳಲ್ಲಿ ಶಾಂತ ರೀತಿಯಿಂದ ವರ್ತಿಸುವಂತೆ ಮನವಿ ಮಾಡಿದ್ದರು. ಅಲ್ಲದೇ, ಕೊರೋನಾ ಸಮಯದಲ್ಲಿ ನಾನು ಮನೆಯಲ್ಲಿ ಇರುವುದಿಲ್ಲ. ಹಾಾಗಾಗಿ ನೀವು ಮನೆಯ ಬಳಿ ಬಂದು ಬರ್ತ್ಡೇ ಸೆಲೆಬ್ರೇಟ್ ಮಾಡುವ ವಿಚಾರ ಮಾಡಬೇಡಿ. ನಿಮಗೆ ನನ್ನ ಮೇಲೆ ಅಭಿಮಾನವಿದ್ದಲ್ಲಿ, ಬಡವರಿಗೆ ಅಕ್ಕಿ ಬೇಳೆ ವಿತರಿಸಿ ಎಂದಿದ್ದರು. ಅದೇ ರೀತಿ, ಅವರ ಫ್ಯಾನ್ಸ್ ಸಾಕಷ್ಟು ಜನರಿಗೆ ಅಕ್ಕಿ ಬೇಳೆ ವಿತರಿಸಿದ್ದರು.
ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ… pic.twitter.com/YFyYjxcGlY
— Darshan Thoogudeepa (@dasadarshan) February 19, 2024
ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ
‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’