Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಿರೌಡಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗೈಬುಸಾಬ ಹಕ್ಕಿಮ್ (29) ಎಂಬಾತನೇ ಮೇಲೆ ಹಲ್ಲೇ ಮಾಡಲಾಗಿದ್ದು, ಮಣಿಕಂಠ ವಡ್ಡರ, ಸಾಹಿಲ್, ಮತ್ತೊಬ್ಬ ಸೇರಿಕೊಂಡು ಗಾಂಜಾ, ಎಣ್ಣೆ ನಶೆಯಲ್ಲಿ ಸುಖಾ ಸುಮ್ಮನೆ ಏಕಾಏಕಿ ತಂಟೆ ತೆಗೆದು ಕಾಲಿನಿಂದ ಒದ್ದು, ಕೆಳಗೆ ಬಿಳಿಸಿ, ಕಲ್ಲಿನಿಂದ ಹಲ್ಲೇ ಮಾಡಿದ್ದಾರೆ. ಪರಿಣಾಮ ಗೈಬುಖಾನ್’ಗೆ ಗಂಭೀರವಾಗಿ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇನ್ನು ಪುಂಡರ ಅಟ್ಟಹಾಸದ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೋಲಿಸರು ಕಡಿವಾಣ ಹಾಕಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಂಡಿಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ
ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ