ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರಿನಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ: ಕುಮಾರಸ್ವಾಮಿ

Political News: ಇಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕರಾದ ಹೆಚ್‌.ನಿಂಗಪ್ಪ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ ಎಂದಿದ್ದಾರೆ.

ಮಾಜಿ ಶಾಸಕರಾದ ಶ್ರೀ ಹೆಚ್.ನಿಂಗಪ್ಪ ಅವರನ್ನು ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷಕ್ಕೆ ಅತ್ಯಂತ ಸಂತೋಷದಿಂದ ಬರಮಾಡಿಕೊಳ್ಳಲಾಯಿತು. ಅವರ ಸೇರ್ಪಡೆಯಿಂದ ತುಮಕೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಎ.ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ಶ್ರೀ ತಿಮ್ಮರಾಯಪ್ಪ, ತುಮಕೂರು ಜೆಡಿಎಸ್ ಅಧ್ಯಕ್ಷರಾದ ಶ್ರೀ ಆಂಜಿನಪ್ಪ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ

ವೀಣಾ ಕಾಶಪ್ಪನವರ್ ಕುರಿತು ಶಾಕಿಂಗ್ ಹೇಳಿಕೆ‌ ನೀಡಿದ ಸಚಿವ ಆರ್.ಬಿ.ತಿಮ್ಮಾಪೂರ್

ನಾಮಪತ್ರ ಸಲ್ಲಿಸಿದ ಯದುವೀರ್ ಒಡೆಯರ್: ಮಗನಿಗೆ ಸಾಥ್ ಕೊಟ್ಟ ರಾಜಮಾತೆ ಪ್ರಮೋದಾದೇವಿ

About The Author