Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವರ ಗಮನದಲ್ಲೂ ಇದು ಇದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಡೆತ್ ನೋಟಲ್ಲೂ ಸಚಿವರ ಬಗ್ಗೆ ಇದೆ. ಸಚಿವರ ರಾಜೀನಾಮೆ ಪಡೆಯಲು ಆಗಿಲ್ಲ. ರಾಜಭವನಕ್ಕೆ ತೆರಳಿ, ರಾಜ್ಯಪಾಲರ ಭೇಟಿ ಮಾಡಲಿದ್ದೇವೆ. ತಕ್ಷಣವೇ ರಾಜೀನಾಮೆ ಪಡೆಯುವಂತೆ ಮನವಿ ಮಾಡಲಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.
ರಾಜೀನಾಮೆಗೆ ಸಿಎಂ ಸೂಚನೆ ವಿಚಾರದ ಬಗ್ಗೆ ಮಾತನಾಡಿರುವ ವಿಜಯೇಂದ್ರ, ಸಿಎಂ ಅಸಹಾಯಕರಾಗಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಧೈರ್ಯವನ್ನ ಸಿಎಂ ಮಾಡಿಲ್ಲ. ಕೂಡಲೇ ರಾಜೀನಾಮೆ ಪಡೆಯಬೇಕು. ಮೂರ್ನಾಲ್ಕು ಅಧಿಕಾರಿಗಳು ಈ ದುಸ್ಸಾಹಸಕ್ಕೆ ಕೈ ಹಾಕಲು ಸಾಧ್ಯವಿಲ್ಲ. ಸಚಿವರ ಗಮನಕ್ಕೆ ತರದೆ ಹೀಗೆ ಮಾಡಲು ಸಾಧ್ಯವಿಲ್ಲ. ಎಲ್ಲೋ ಒಂದು ಕಡೆ ಹಣವನ್ನ ಲೋಕಸಭಾ ಚುನಾವಣೆಗೆ ಬಳಸಲಾಗಿದೆ. ಸಿಎಂ ಕೂಡಲೇ ಸಿಬಿಐಗೆ ಕೊಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ನಾನು ಕುಪ್ಪುಸ್ವಾಮಿ ಮಗ, ಕರುಣಾನಿಧಿ ಮಗ ಆಗಿದ್ದರೆ ಗೆಲ್ಲುತ್ತಿದ್ದೆ: ಸೋತರೆಂದು ಟೀಕಿಸಿದವರಿಗೆ ಅಣ್ಣಾಮಲೈ ತಿರುಗೇಟು