Thursday, June 19, 2025

Latest Posts

ನಾಗೇಂದ್ರ ರಾಜೀನಾಮೆಯಿಂದ ನಮಗೆ ಸಮಾಧಾನವಾಗಿಲ್ಲ. ಸಿಎಂ ರಾಜೀನಾಮೆ ನೀಡಲಿ: ಶ್ರೀರಾಮುಲು

- Advertisement -

Political News: ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು‌ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಿದ್ದರಾಮಯ್ಯ ಕೇವಲ ಬೊಬ್ಬೆ ಹೊಡೆದುಕೊಂಡು ಬಂದಿದ್ದಾರೆ. ಎಸ್ ಸಿ, ಎಸ್ಟಿಗಳಿಗೆ ಅನ್ಯಾಯ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಶಿಕ್ಷಣ, ಮನೆ, ಭೂಮಿ, ಮೂಲಭೂತ ಸೌಲಭ್ಯ, ಸಾಲ ಕೊಡಿಸುವ ಕೆಲಸ ಮಾಡಬೇಕು. ಅದಕ್ಕಾಗಿ 24% ಹಣ ಪ್ರತಿ ಇಲಾಖೆ ಮೀಸಲಿಡುತ್ತದೆ.

ಆದರೆ ಸಿದ್ದರಾಮಯ್ಯ ಸರ್ಕಾರ ಕಳೆದ ವರ್ಷ 11 ಸಾವಿರ ಕೋಟಿ ಹಣ ಬಳಸಿಕೊಂಡಿದೆ. ಈ ವರ್ಷ 14 ಸಾವಿರ ಕೋಟಿ ಮತ್ತೆ ಬಳಕೆ ಮಾಡುತ್ತಿದೆ. ದಲಿತರ 25 ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ಬಸವರಾಜ ಬೊಮ್ಮಾಯಿ ಸಮುದಾಯಕ್ಕೆ ಸಚಿವಾಲಯ ಮಾಡಿ ಸಚಿವರನ್ನು ನೇಮಕ ಮಾಡಿದ್ದರು. ಮೀಸಲಾತಿಯನ್ನು 7% ಗೆ ಬೊಮ್ಮಾಯಿ‌ ಏರಿಸಿದರು. ವಾಲ್ಮೀಕಿ ನಿಗಮದಲ್ಲಿ ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ. ಸಚಿವರ ಮೌಖಿಕ ಆದೇಶದ ಮೇಲೆ ತೆಲಂಗಾಣಕ್ಕೆ ಹಣ ವರ್ಗಾವಣೆ ಮಾಡಿದರು. ದಲಿತರ ಹಣ ವೈನ್ ಶಾಪ್, ಚಿನ್ನದ ಅಂಗಡಿಗಳಲ್ಲಿ ಡ್ರಾ ಮಾಡಿದ್ದಾರೆ. ಸಿಎಂಗೆ ಮಾಹಿತಿ ಇಲ್ಲದೇ ಈ ರೀತಿ ಆಗಲು ಸಾಧ್ಯವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ಹಣಕಾಸು ಇಲಾಖೆಯಲ್ಲೇ ಭ್ರಷ್ಟಾಚಾರ ನಡೆದಿದೆ. ಸಿದ್ಧರಾಮಯ್ಯ ಹಣಕಾಸು ಸಚಿವರೂ ಆಗಿದ್ದಾರೆ. ಸಿದ್ದರಾಮಯ್ಯ ಮೇಲೆ ನಮಗೆ ಅನುಮಾನ ಇದೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಜೂನ್‌ 28ಕ್ಕೆ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ನಾಗೇಂದ್ರ ರಾಜೀನಾಮೆಯಿಂದ ನಮಗೆ ಸಮಾಧಾನ ಬಂದಿಲ್ಲ. ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಈ ಶತಮಾನದ ದೊಡ್ಡ ಭ್ರಷ್ಟಾಚಾರ ಇದು ಎಂದು ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

- Advertisement -

Latest Posts

Don't Miss