ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದು ಹೋರಾಟ ಮುಂದುವರಿಸುತ್ತೇವೆ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದ್ರೆ ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿ ಮೇಲೆ ಆರೋಪ ಹಾಕಿ ತೇಪೆ ಹಾಕಲು ಸಿಎಂ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಹೀಗಾಗಿ ಇಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೇವೆ. ಬೆಲೆ ಏರಿಕೆಯಿಂದ ರೈತರಿಗೆ ಸಂಕಷ್ಟ ಹೆಚ್ಚಿದೆ. ಪೆಟ್ರೋಲ್, ಹಾಲಿನ ಬೆಲೆ ಎಲ್ಲಾ ಹೆಚ್ಚಾಗಿದೆ ಎಂದರು.
ನಾಗೇಂದ್ರ ಆಪ್ತರ ಬೆದರಿಕೆ ಬಗ್ಗೆ ಸತ್ಯನಾರಾಯಣ ವರ್ಮಾ ಅವ್ರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಆದರೆ ಇವತ್ತಿನವರೆಗೂ ನಾಗೇಂದ್ರ ಅವರನ್ನು ಕರೆದು ಎಸ್ಐಟಿ ವಿಚಾರಣೆ ಮಾಡುವ ಧೈರ್ಯ ತೋರಿಸಿಲ್ಲ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಐಟಿ ಮಾಜಿ ಮಂತ್ರಿ ಯನ್ನು ನೋಟಿಸ್ ಕೊಟ್ಟು ತನಿಖೆ ಮಾಡುತ್ತಿಲ್ಲ. ತೇಪೆ ಹಚ್ಚಿ ಸರ್ಕಾರವನ್ನು ಬಚಾವ್ ಮಾಡಲು ಅಧಿಕಾರಿಗಳು ಮಾಡಿದ್ದಾರೆ. ಇವತ್ತು ಅದಕ್ಕಾಗಿ ನಮ್ಮ ಕಾರ್ಯಕರ್ತರು ಎಲ್ಲಾ ಕಡೆ ಪ್ರತಿಭಟನೆ ಮಾಡ್ತಿದ್ದಾರೆ ಎಂದರು.
ನಿನ್ನೆ ಕೋರ್ಟ್ ಕೂಡ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಒಂದೇ ವರ್ಷದಲ್ಲಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ನಿನ್ನೆ ಸ್ವಾಮೀಜಿ ಗಳು ಹೇಳಿಕೆ ಕೊಟ್ಟಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಸಚಿವ ರಾಜಣ್ಣ ಅವರು ಉತ್ತರ ಕೊಟ್ಟಿದ್ದಾರೆ. ಜನರ ಪಾಲಿಗೆ ಸರ್ಕಾರ ಬದುಕಿದೆಯಾ ಎಂಬ ಪ್ರಶ್ನೆ ಯನ್ನು ಜನರು ಮಾಡ್ತಿದ್ದಾರೆ. ಲೋಕಸಭಾ ಚುನಾವಣೆಗೂ ಮುಂಚೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಟ್ಟಿಗೆ ಕಾಣೋದು ಏನು..?, ಇಬ್ಬರು ಪರಸ್ಪರ ತಿಂಡಿ ತಿನ್ನಿಸೋದು ಏನು..? ಹೆಗಲ ಮೇಲೆ ಕೈ ಹಾಕೋದು ಏನು..? ನೋಡಿ ಈಗ ಒಬ್ಬರಿಗೊಬ್ಬರು ಬುಡ ಕುಯ್ದುಕೊಳ್ಳುವ ಕೆಲಸ ಮಾಡ್ಕೊಳ್ತಿದ್ದಾರೆ. ರಸ್ತೆಯಲ್ಲಿ ನಿಂತುಕೊಂಡು. ಹೊಡೆದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಬರುವ ದಿನಗಳಲ್ಲಿ ಇನ್ನೂ ಏನೇನು ಆಗುತ್ತೋ ಎಂದರು.
ಇದರ ಜೊತೆಗೆ ಹಾಸ್ಯಾಸ್ಪದ ಅಂದರೆ ಮೂರು ಡಿಸಿಎಂ ಚರ್ಚೆ ನಡೀತಿದೆ. ಡಿ.ಕೆ ಶಿವಕುಮಾರ್ ರನ್ನು ಬಲಿಯಾಗಬೇಕು ಎಂದು ಸಿಎಂ ಸಚಿವರ ಮೂಲಕ ಎತ್ತಿಸಿದ್ದಾರೆ. ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಸಚಿವರು ಹೊಡೆದಾಡಿಕೊಳ್ತಿದ್ದಾರೆ. ಹೀಗಾಗಿ ನಮ್ಮ ಮುಂದೆ ಇರೋದು ಹೋರಾಟದ ದಿನಗಳು. ಮುಂದೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡ್ತೀವಿ ಎಂದರು.
ಈಗ ಸಿದ್ದರಾಮಯ್ಯ ಬುಡಕ್ಕೆ ಬಂದಿದೆಯಲ್ವಾ?. ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲ. ಬೆಲೆ ಏರಿಕೆ ಬಗ್ಗೆ ಮಾತಾಡಿದ್ರೆ ಉಡಾಫೆ ಮಾತಾಡ್ತಾರೆ. ಕಾಂಗ್ರೆಸ್ ವಿರುದ್ದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ವಿಶ್ವಾಸ ಕಡಿಮೆಯಾಗುತ್ತಿದೆ. ನಾಳೆ ಹಾಲಿನ ದರ ಏರಿಕೆ ಬಗ್ಗೆ ರೈತ ಮೋರ್ಚಾ ಹೋರಾಟ ಮಾಡ್ತಿದೆ ಎಂದರು.