ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪವಿತ್ರಗೌಡ ದರ್ಶನ್ ಅವರ ಪತ್ನಿ ಅಲ್ಲ, 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ . 19-05-2003 ರಲ್ಲಿ ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ ಎಂದು ಬರೆದಿದ್ದಾರೆ.
ಇಷ್ಟೇ ಅಲ್ಲದೆ ಈ ಪತ್ರದಲ್ಲಿ, ಪವಿತ್ರಗೌಡ ಸಂಜಯ್ ಸಿಂಗ್ ಎಂಬುವವರನ್ನು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ. ನೀವು ಮಾಧ್ಯಮಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಗೌಡ ಅಂತ ಹೇಳಿದ್ದೀರಿ. ಅದೇ ರೀತಿ ಗೃಹಸಚಿವರೂ ಕೂಡ ಒಮ್ಮೆ ಅದನ್ನೇ ಉಚ್ಚರಣೆ ಮಾಡಿದ್ದಾರೆ. ಹೀಗಾಗಿ ಪೊಲೀಸ್ ರೆಕಾರ್ಡ್ ಅಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ, ದರ್ಶನ್ ಅವರನ್ನು ಮದುವೆಯಾಗಿದ್ದಾರೆ ಎಂದು ಉಲ್ಲೇಖಿಸಬೇಡಿ, ಯಾವುದೇ ದಾಖಲೆಗಳಲ್ಲಿ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಹಾಗಾದ್ರೆ, ದರ್ಶನ್ ಬಂಧನವಾದ 24 ದಿನಗಳ ಬಳಿಕ ವಿಜಯಲಕ್ಷ್ಮಿ ಅವರು ಪತ್ರ ಬರೆದಿದ್ದೇಕೆ ಅನ್ನೋದ್ರ ಕಂಪ್ಲೀಟ್ ರಿಪೋಟ್ ಮೇಲಿನ ವಿಡಿಯೋದಲ್ಲಿದೆ.