Thursday, June 19, 2025

Latest Posts

ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ: ಗ್ಯಾರೆಂಟಿ ಯೋಜನೆ ಪ್ರಾಧಿಕಾರಕ್ಕೆ ಮುನಿಯಪ್ಪ ರಾಜೀನಾಮೆ

- Advertisement -

Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರನ್ನಾಗಿ ಮುನಿಯಪ್ಪರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಮಾಡಿತ್ತು. ಆದರೆ ಶಾಸಕ ಪ್ರದೀಪ್ ಈಶ್ವರ್ ನಡುವಳಿಕೆಗೆ ಬೇಸತ್ತು, ಇದೀಗ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುನಿಯಪ್ಪ, ತಮಗೆ ಅನಾರೋಗ್ಯವಿರುವ ಕಾರಣ, ಈ ಕೆಲಸ ವಹಿಸಿಕೊಳ್ಳುತ್ತಿಲ್ಲ. ಈಗಿನ ಶಾಸಕರು ನಿಯತ್ತಾಗಿ ಕಾರ್ಯ ನಿರ್ವಹಿಸುವವರಿಗೆ ಬೆಲೆ ಕೊಡುವುದಿಲ್ಲ. ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಅಲ್ಲದೇ, ಕಾಲ್ ಮಾಡಿದರೂ ಸ್ವೀಕರಿಸುವುದಿಲ್ಲ. ನಮ್ಮನ್ನು ಅಸಡ್ಡೆ ಮಾಡುತ್ತಾರೆಂದು ಆರೋಪಿಸಿದ್ದಾರೆ.

- Advertisement -

Latest Posts

Don't Miss