Raybhag News: ರಾಯಭಾಗ್ ತಾಲೂಕಿನ ಕುಡಚಿ ಪುರಸಭೆ ಎಲೆಕ್ಷನ್ ನಡೆದಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ. ಅಧಕ್ಷ್ಯ ಸ್ಥಾನ ಕಾಂಗ್ರೆಸ್ಗೆ ಒಲಿದರೆ, ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ.
23 ಸದಸ್ಯರ ಪುರಸಭೆಯಲ್ಲಿ ಕಾಂಗ್ರೆಸ್ 14 ಸ್ಥಾನ, ಬಿಜೆಪಿ 8 ಮತತ್ತು 1 ಸ್ವಾತಂತ್ರ್ಯ ಅಭ್ಯರ್ಥಿಗಳಿದ್ದು, ಎರಡನೇಯ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಠ ಪಂಗಡದ ಮೀಸಲಾತಿ ಬಂದಿತ್ತು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆ, ಕಾಂಗ್ರೆಸ್ನ ಹಮೀದೋದ್ದಿನ್ ಸೈದೋದ್ದೀನ್ ರೋಹಿಲೆ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಬಿಜೆಪಿಯ ಶಿವಪ್ಪ ಧರ್ಮಣ್ಣ ಗಸ್ತಿಯವನರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶಿವಪ್ಪ ಸರಳವಾಗಿ ನಾಮಪತ್ರ ಸಲ್ಲಿಸಿದ್ದು, ಹಮಿದೋದ್ದೀನ್ ಭರ್ಜರಿಯಾಗಿ ದರ್ಗಾಗೆ ತೆರಳಿ ಪ್ರಾರ್ಥಿಸಿ, ನಾಮಪತ್ರ ಸಲ್ಲಿಕೆ ಮಾಡಿದರು. ಅಲ್ಲದೇ, ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ, ಕಾಂಗ್ರೆಸ್ಸಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ, ಗುಲಾಲು ರಂಗು ಎರಚಿ ಸಂಭ್ರಮಿಸಿದರು.
ಈ ವೇಳೆ ಶಾಸಕರಾದ ಮಹೇಂದ್ರ ಅವರು ಮಾತನಾಡಿ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಎಲ್ಲರೂ ಸೇರಿ ಕುಡಚಿ ಪಟ್ಟಣವನ್ನು ಅಭಿವೃದ್ಧಿ ಮಾಡೋಣ. ಪಕ್ಷದ ಶಾಸಕರು ಸಂಸದರೆಲ್ಲ ಕಾಂಗ್ರೆಸ್ನವರೇ ಇರುವುದರಿಂದ ಪಕ್ಷಪಾತ ಮಾಡದೇ, ಇಲ್ಲಿನ ಅಭಿವೃದ್ಧಿ ಮಾಡೋಣವೆಂದು ಹೇಳಿದರು.