ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ.
ಪಿಎಲ್ಡಿ ಬ್ಯಾಂಕ್ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ ಹಿನ್ನಲೆ ರಾಜೀನಾಮೆ ನೀಡಿದ್ದರಿಂದ, ಚುನಾವಣೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುಧಾಕರ್ ಬಣದ ಗಂಗರೆಕಾಲುವೆ ಪ್ರಸಾದ್ ಅವಿರೋಧ ಆಯ್ಕೆಯಾಗಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಈ ವೇಳೆ ಮಾತನಾಡಿದ ಸುಧಾಕರ್, ರಾಜ್ಯದಲ್ಲೇ ಅತ್ಯುತ್ತಮವಾಗಿ ನಡೆಯುತ್ತಿರುವ ಭೂ ಅಭಿವೃದ್ಧಿ ಬ್ಯಾಂಕ್ಗಳ ಪೈಕಿ ಚಿಕ್ಕಬಳ್ಳಾಪುರ ಪಿಎಲ್ಡಿ ಕೂಡ ಒಂದಾಗಿದೆ. ಇಲ್ಲಿ ಭ್ರಷ್ಟಾಚಾರ ರಹಿತವಾಗಿ ಕಾರ್ಯಭಾರ ನಡೆಸಬೇಕಿದೆ. ಉತ್ತಮ ಸೇವೆಯನ್ನು ಸಲ್ಲಿಸಬೇಕೆಂದು ನೂತನ ಅಧ್ಯಕ್ಷರಿಗೆ ಸಲಹೆ ನೀಡಿದ್ರು