Saturday, July 5, 2025

Latest Posts

ನಾಗಮಂಗಲ ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

- Advertisement -

Mandya News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಕೋಮುಗಲಭೆ ಉಂಟಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿ, ನಾನು ಹೊರಗೆ ಹೋಗಿದ್ದೆ. ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ. ಕೂಡಲೇ ನಾನು ಎಡಿಜಿಪಿ, ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ. ಮುಸ್ಲಿಂ ಹಾಗೂ ಹಿಂದೂ ನಡುವೆ ಘರ್ಷಣೆಯಾಗಿದೆ. ಎರಡು ಸಮುದಾಯದ ನಡುವೆ ಗಲಾಟೆಯಾಗಿತ್ತು. ಪೊಲೀಸರು ಕನ್ವಿನ್ಸ್ ಮಾಡುವ ಪ್ರಯತ್ನ ಯಶಸ್ವಿಯಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ದುಡುಕೋದು ಬೇಡ.. ದೇವರ ಕೆಲಸ ಈ ರೀತಿಯಾಗಿ ಕಮ್ಯೂನಲ್ ಗೆ ತಿರುಗುವುದು ಬೇಡ. ತಡ ರಾತ್ರಿಯೇ ಗಣೇಶ ವಿಸರ್ಜನೆ ಮಾಡಿದ್ದಾರೆ, ಶಾಂತಿಗೊಳಿಸುವ ಪ್ರಯತ್ನವೂ ಆಗಿದೆ. ಸ್ಥಳದಲ್ಲಿ ಒಂದೆರಡು ಅಂಗಡಿಗೆ ತೊಂದರೆಯಾಗಿದೆ. ಗೃಹ ಮಂತ್ರಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಶಾಂತಿ ಕಾಪಾಡುವ ಕೆಲಸ ಎಲ್ಲರದ್ದೂ ಆಗಬೇಕಿದೆ.

ಈ ಪ್ರಕರಣದಲ್ಲಿ ಸಾಕಷ್ಟು ಜನನ ವಶಕ್ಕೆ ಪಡೆಯಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಗಲಿ ಕಾನೂನು ಬದ್ಧವಾಗಿ ಕ್ರಮ ಆಗತ್ತೆ. ನಾನು ಮಾಹಿತಿ ಮಾತ್ರ ಪಡೆದುಕೊಂಡಿದ್ದೇನೆ ಸ್ಥಳಕ್ಕೆ ಹೋಗಿ ಏನಾಗಿದೆ ಅಂದು ತಿಳಿದುಕೊಂಡಿಲ್ಲ. ಈಗ ಸ್ಥಳಕ್ಕೆ ಹೋಗುತ್ತೇನೆ ನಿಮ್ಮ ಮಾಧ್ಯಮಗಳು ಅಲ್ಲಿವೆ ಅಲ್ಲಿ ಮಾತನಾಡುತ್ತೇನೆ. ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ ನಾನು 15 ದಿನದಿಂದ‌ರಾಜ್ಯದಲ್ಲಿ ಇರಲಿಲ್ಲ ನಾನು ಬೇರೆಕಡೆ ಹೋಗಿದ್ದೆ. ನಾಗಮಂಗಲ ಹಿಂದೆಯೂ ಶಾಂತವಾಗಿದೆ ಮುಂದೆಯೂ ಅದೇ ರೀತಿ ಇರತ್ತೆ. ಇಂತಹ ಸಂಧರ್ಭದಲ್ಲಿ ಸಮುದಾಯವನ್ನ ವಿಂಗಡಿಸುವುದು ಸೂಕ್ತವಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಆಗತ್ತೆ ಎಂದು ಸಚಿವರು ಹೇಳಿದ್ದಾರೆ.

ಸ್ಥಳದಲ್ಲಿ ಐಜಿ ಇದ್ದಾರೆ ಜಿಲ್ಲಾಧಿಕಾರಿ ಎಸ್ಪಿ ಎಲ್ಲರೂ ಇದ್ದಾರೆ. ಗಣಪತಿ ವಿಸರ್ಜನೆ ವೇಳೆ ಸಂಜೆ 5 ಗಂಟೆ ಹಾಗೂ ನಿಗದಿತ ಸಮಯದ ಒಳಗೆ ವಿಸರ್ಜನೆ ಮಾಡಬೇಕಿದೆ ಅಂತ ಹೇಳಿದ್ದೇವೆ. ರಾತ್ರಿ ಕ್ಲೋಸ್ ಮಾಡಿ ಅಂತಿವಿ ದೇವರ ಮೇಲೆ ಅಭಿಮಾನಕ್ಕೆ ಲೇಟ್ ಆಗತ್ತೆ. ಇಂತಹ ಸೂಕ್ಷ ಸ್ಥಳಗಳಲ್ಲಿ ಪೊಲೀಸರು ಎಚ್ಚರ ವಹಿಸಬೇಕಿತ್ತು. ನಾನು ನಾಗಮಂಗಲಕ್ಕೆ ತೆರಳಿ ಶಾಂತಿ ಸಭೆ ನಡೆಸಲಿದ್ದೇನೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಚೆಲುವರಾಯಸ್ವಾಮಿ,  ಅವರು ಮಾಜಿ ಮುಖ್ಯಮಂತ್ರಿಗಳು, ಸಾಕಷ್ಟು ಅನುಭವ ಇದೆ. ಅವರು ಇದನ್ನ ತಿಳಿ ಆಗಲು ಸಲಹೆ, ಸೂಚನೆ ಮಾರ್ಗದರ್ಶನ ಕೊಡ್ತಾರೆ ಅಂದುಕೊಂಡಿದ್ದೆ. ಅದನ್ನ ಮೀರಿ ಅವರು ರಾಜಕೀಯವಾಗಿ ಮಾತನಾಡ್ತಾರೆ ಅಂದರೆ ದೇವರು ಒಳ್ಳೆದು ಮಾಡ್ಲಿ. ನಾನು‌ ಖಂಡಿತವಾಗಿ ರಾಜಕೀಯವಾಗಿ ಉತ್ತರ ನೀಡಲು ಹೋಗಲ್ಲ. ನಮ್ಮ ಸರ್ಕಾರದ ಮೊದಲ ಆದ್ಯತೆ ಸಾರ್ವಜನಿಕರ ರಕ್ಷಣೆ ಮಾಡುವುದು. ನಂತರ ವಿರೋಧ ಪಕ್ಷದ ಪ್ರಚೋದನೆ ಅಥಾವ ಪ್ರಶ್ನೆಗೆ ಉತ್ತರ ಕೊಡ್ತೀವಿ. ಕುಮಾರಸ್ವಾಮಿ ಅಲ್ಲಿಯ ಸಂಸದರು ನಾನು ಅವರ ಜೊತೆಗೆ ಕೆಲಸ ಮಾಡ್ತಾ ಇದ್ದೇನೆ. ಅವರಿದ್ದಾಗ ಏನೇನು ಆಗಿದೆ ಅಂತ ಎಲ್ಲರಿಗೂ ಗೊತ್ತಿದೆ. ನಾನು ರಾಜಕೀಯವಾಗಿ ಏನೂ ಉತ್ತರ ನೀಡಲು ಹೋಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

- Advertisement -

Latest Posts

Don't Miss