Wednesday, February 5, 2025

Latest Posts

ಗಣಪತಿಯನ್ನು ಪೊಲೀಸ್ ವಾಹನದಲ್ಲಿ ಇರಿಸಿದ್ದಕ್ಕೆ ಬಿ.ವೈ.ವಿಜಯೇಂದ್ರ ಆಕ್ರೋಶ

- Advertisement -

Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ.

ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ.

ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸುವ ಮಾರ್ಗಸೂಚಿಗಳು ಉದ್ದೇಶಪೂರ್ವಕ ಎಂಬ ಭಾವನೆ ಹಿಂದೂ ಸಮಾಜದಲ್ಲಿ ಬಲವಾಗಿ ಬೇರೂರಿದೆ ಇದಕ್ಕೆ  ನಾಗಮಂಗಲದಂತಹ ಘಟನೆ ಸಾಕ್ಷಿಯಾಗಿದೆ, ದುರ್ಘಟನೆ ಉದ್ಭವಿಸುವುದಕ್ಕೆ ಆಸ್ಪದ ನೀಡುವ ನಿಟ್ಟಿನಲ್ಲಿ ಉತ್ಸವ ವಿರೋಧಿ ದುಷ್ಟ ಗುಂಪುಗಳು ಗಣೇಶ ಮೆರವಣಿಗೆ ಸಂದರ್ಭದಲ್ಲಿ ದಾಂಧಲೆ ನಡೆಸಿ ಅಟ್ಟಹಾಸ ಮೆರೆಯುವ ಪರಿಸ್ಥಿತಿಯ ಸೃಷ್ಟಿಗೆ ಕಾನೂನು ಸುವ್ಯವಸ್ಥೆಯ ನಿಷ್ಕ್ರೀಯತೆ ಅವಕಾಶ ಮಾಡಿಕೊಡುತ್ತಿದೆ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧವಾಗಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ ‘ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು’ ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ, ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

- Advertisement -

Latest Posts

Don't Miss