Thursday, June 19, 2025

Latest Posts

ದರ್ಶನ್‌ಗೆ ಸಿಗದ ಜಾಮೀನು: ದಾಸನ ಆಸೆ ನಿರಾಸೆ! ಸೆ.30ಕ್ಕೆ ಮುಂದೂಡಿದ ವಿಚಾರಣೆ

- Advertisement -

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಹಾಗಾಗಿ ದರ್ಶನ್ ಅವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಶುಕ್ರವಾರ ನಡೆಯುವ ವಿಚಾರಣೆಯಲ್ಲಿ ಜಾಮೀನು ಸಿಕ್ಕೇ ಸಿಗುತ್ತೆ ಎಂಬ ಆಸೆಯಲ್ಲಿದ್ದ ದರ್ಶನ್ ಗೆ ಜಾಮೀನು ಸಿಗದೆ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.

ಶುಕ್ರವಾರ ನಡೆದ ಜಾಮೀನು ಅರ್ಜಿಗೆ ಎಸ್.ಪಿ.ಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ್ದರು. ಆಕ್ಷೇಪಣೆ ವಾದವನ್ನು ಸೋಮವಾರ ಮಂಡಿಸುವುದಾಗಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರಿಂದ ಸೆಪ್ಟಂಬರ್ 30‍ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಅದೇನೆ ಇರಲಿ, ಒಂದಂತೂ ಸತ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಕಷ್ಟಗಳೇ ಎದುರಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಮಾಡಿದ ನಂತರ ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷಾಂತರ ಕಾಸು ನೀಡುವ ಆಮಿಷ ಒಡ್ಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ತೆರಳಿ ದರ್ಶನ್ ಅವ‌ರನ್ನು ಆರೇಳು ತಾಸುಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಬಳಿಕ ಮನೆಯಲ್ಲಿ ಅಷ್ಟೊಂದು ಹಣ ಹೇಗೆ ಬಂತು? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ತಂದು ಕೊಟ್ಟವರಾರು? ಯಾವ ಅಕೌಂಟ್ ನಿಂದ ಹಣ ವರ್ಗಾವಣೆ ಆಯ್ತು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು ದರ್ಶನ್‌ ಅವರನ್ನು ವಿಚಾರಣೆ ನಡೆಸುತ್ತಾರೆ ಎಂಬ ವಿಷಯ ಗೊತ್ತಾಗಿ, ದರ್ಶನ್ ಅವರ ಆಡಿಟರ್ ಎಂ ಎಸ್ ರಾವ್ ಮತ್ತು ಅಸಿಸ್ಟೆಂಟ್ ಅರುಣ್ ಇಬ್ಬರು ಕೂಡ ಬಳ್ಳಾರಿ ಜೈಲಿಗೆ ಬೆಳಗ್ಗೆಯೇ ಆಗಮಿಸಿದ್ದಾರೆ. ಐಟಿ ಅಧಿಕಾರಿಗಳು ಜೈಲು ಅಧೀಕ್ಷಕರ ಕೊಠಡಿಯಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲೇ ವಿಚಾರಣೆ ನಡೆಸಿದ್ದಾರೆ. ಕೊಲೆ ಪ್ರಕರಣದಲ್ಲಿ ಬಳಿಕೆಯಾದ ಒಟ್ಟು ಹಣದ ಬಗ್ಗಯೂ ವಿಚಾರಣೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ರೇಣುಕಾ ಸ್ವಾಮಿ ಶವ ಸಾಗಿಸಲು ಒಟ್ಟು 30 ಲಕ್ಷ ರು. ದರ್ಶನ್ ಅವರ ಮನೆಯಲ್ಲಿ ಸೀಜ್ ದರ್ಶನ್ ಮನೆಯಲ್ಲಿ ಸೀಜ್ ಆಗಿದ್ದ 40 ಲಕ್ಷ ರೂ., ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಸೀಜ್ ಆಗಿದ್ದ 3 ಲಕ್ಷ ರೂ., ಮೈಸೂರು ಹೊಟೇಲ್‌ನಲ್ಲಿ ಸೀಜ್ ಆಗಿದ್ದ 1 ಲಕ್ಷ ರೂ. ಸೇರಿ ಒಟ್ಟು 84 ಲಕ್ಷ ರೂ. ಹಣದ ಬಗ್ಗೆ ಕೂಡ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

- Advertisement -

Latest Posts

Don't Miss