Thursday, June 19, 2025

Latest Posts

ಚಿತ್ರದುರ್ಗ ಹಿಂದೂ ಮಹಾಗಣಪತಿ ಮೆರವಣಿಗೆ: ದರ್ಶನ್ ಭಾವಚಿತ್ರ ಬಾವುಟ ಹಾರಾಟ! ಗಲಾಟೆ, ವಾಗ್ವಾದ

- Advertisement -

Chitradurga News: ದೇಶದಲ್ಲೇ ಎರಡನೆಯ ಅತೀ ದೊಡ್ಡ ಮೆರವಣಿಗೆಗೆ ಪಾತ್ರವಾಗಿರೋದು ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ. ಹೌದು, ಹಲವು ವರ್ಷಗಳಿಂದಲೂ ಹಿಂದೂ ಮಹಾಗಣಪತಿ ಮೆರವಣಿಗೆ ಅಂದರೆ ಅದೊಂದು ಧಾರ್ಮಿಕತೆಯ ಸಂಕೇತ. ಪ್ರತಿ ವರ್ಷದಂತೆ ಈ ವರ್ಷ ಕೂಡ ಹಿಂದೂ ಮಹಾಗಣಪತಿ ಮೆರವಣಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದಿದೆ.

ಆದರೆ, ಈ ಮೆರವಣಿಗೆಯಲ್ಲಿ ನಟ ದರ್ಶನ್ ಅವರ ಭಾವಚಿತ್ರ ಇರುವ ಬಾವುಟ ಹಾರಾಡಿದೆ. ಈ ಕಾರಣಕ್ಕೆ ಮೆರವಣಿಗೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಕಾರ್ಯಕ್ರಮ ಆಯೋಜಿಸಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗು ದರ್ಶನ್ ಅಭಿಮಾನಿಗಳ ನಡುವೆ ಕೆಲ ಕಾಲ ವಾಗ್ವಾದ ಕೂಡ ನಡೆದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದಾರೆ. ಸೆ.28ರ ಶನಿವಾರ ಹಿಂದೂ ಮಹಾಗಣತಿಯ ಬೃಹತ್ ಶೋಭಾಯಾತ್ರೆಯಲ್ಲಿ ದರ್ಶನ್ ಅವರ ಕೆಲ ಅಭಿಮಾನಿಗಳು ಅವರ ಭಾವಚಿತ್ರ ಹಿಡಿದು ಅಡ್ಡಾಡಿದ್ದಾರೆ.

ಈಗಾಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಆದರೂ ಶನಿವಾರ (ಸೆಪ್ಟೆಂಬರ್‌ 28) ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಯಲ್ಲಿ ಕೆಲ ಅಭಿಮಾನಿಗಳು ದರ್ಶನ್ ಭಾವಚಿತ್ರದ ಬಾವುಟ ಹಿಡಿದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ವೇಳೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗೂ ದರ್ಶನ್ ಫ್ಯಾನ್ಸ್ ಮಧ್ಯೆ ವಾಗ್ವಾದ ನಡೆಯಿತು.

ಚಿತ್ರದುರ್ಗ ನಗರದ ಮದಕರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಮದಕರಿ ವೃತ್ತದಲ್ಲಿ ಕೆಲವರು ಸುದೀಪ್ ಭಾವಚಿತ್ರದ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದರೆ, ಇನ್ನೊಂದೆಡೆ ಕೆಲವರು ದರ್ಶನ್ ಭಾವಚಿತ್ರದ ಬಾವುಟ ಹಿಡಿದು ಪ್ರದರ್ಶನ ಮಾಡಿದ್ದಾರೆ. ಈ ವೇಳೆ ದರ್ಶನ್ ಭಾವಚಿತ್ರದ ಬಾವುಟ ಹಿಡಿದವರ ಮೇಲೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ದರ್ಶನ್ ಅಭಿಮಾನಿಗಳ ಕೈಯಲ್ಲಿದ್ದ ಬಾವುಟ ಕಸಿದುಕೊಂಡು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದರ್ಶನ್ ಭಾವಚಿತ್ರದ ಬಾವುಟ ಕಿತ್ತುಕೊಮಡು ಸ್ಥಳೀಯ ಪೊಲೀಸರಿಗೆ ನೀಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಬಹುದು ಎಂದು ಯೋಚಿಸಿದ ಪೊಲೀಸರು, ದರ್ಶನ್‌ ಭಾವಚಿತ್ರವಿದ್ದ ಬಾವುಟಗಳನ್ನು ಸೀಜ್ ಮಾಡಿದ್ದಾರೆ.

ಈಗಾಗಲೇ ರಾಜ್ಯದ ಹಲವೆಡೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಸಾಕಷ್ಟು ಗದ್ದಲ ನಡೆದಿವ. ಅವುಗಳು ಕೋಮುಗಲಭೆಗೂ ಕಾರಣವಾಗಿವೆ. ದೇಶದಲ್ಲಿಯೇ ಅತೀ ದೊಡ್ಡದಾಗಿ ಎರಡನೇ ಹಿಂದೂ ಮಹಾಗಣಪತಿ ಮೆರವಣಿಗೆ ನಡೆಯುವುದು ಕೋಟೆನಾಡು ಚಿತ್ರದುರ್ಗದಲ್ಲಿ.

ಇದುವರೆಗೂ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಗಲಾಟೆಯಾಗದಂತೆ ಕಾಪಾಡಿಕೊಂಡು ಬರಲಾಗಿದೆ. ಇಂತಹ ಕ್ಷುಲ್ಲಕ ಹಾಗು ಸೂಕ್ಷ್ಮ ವಿಷಯಗಳಿಂದ ಗಲಾಟೆ ಆಗದಂತೆ ಕಾರ್ಯಕರ್ತರು ಮತ್ತು ಪೊಲೀಸರು ಎಚ್ಚರವಹಿಸಿಕೊಂಡು ಬಂದಿದ್ದಾರೆ. ಅದೇನೆ ಇರಲಿ, ಅಭಿಮಾನಿಗಳಿಗೆ ಬಾವುಟ ಹಿಡಿದು ಕುಣಿಯುವ ತವಕ.

ಆದರೆ, ಅದರಿಂದಾಚೆ ಆಗುವ ಅಡ್ಡ ಪರಿಣಾಮಗಳು ಗೊತ್ತಾಗುವುದಿಲ್ಲ. ಅನೇಕ ಸಲ ಫ್ಯಾನ್ ವಾರ್ ಕೂಡ ನಡೆದಿದೆ. ನಡೆಯುತ್ತಲೇ ಇದೆ. ಈ ನಡುವೆ, ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭಾವಚಿತ್ರದ ಬಾವುಟ ಹಿಡಿದು ಹಾರಾಟ ನಡೆಸಿದರೆ ಅಲ್ಲಿದ್ದವರ ಮೇಲೆ ಪರಿಣಾಮ ಬೀರದೇ ಇರುತ್ತಾ? ಅದರಲ್ಲೂ ಆರೋಪಿ ಸ್ಥಾನದಲ್ಲಿರುವ ದರ್ಶನ್ ಫೋಟೋ ಹಿಡಿದು ಮೆರವಣಿಗೆಯಲ್ಲಿ ಕುಣಿದರೆ, ಕಾರ್ಯಕರ್ತರು ಸುಮ್ಮನಿರುತ್ತಾರಾ? ಅಂಧಾಭಿಮಾನಿಗಳು ಹುಚ್ಚು ಪ್ರೀತಿ ಅಭಿಮಾನಕ್ಕೆ ಏನು ಹೇಳಲಿ?

- Advertisement -

Latest Posts

Don't Miss