Hubballi News: ಹುಬ್ಬಳ್ಳಿ : ಚಾರ್ಟೆಡ್ ಅಕೌಂಟೆಂಟ್ (CA) ಒಬ್ಬರು 60ನೇ ವಯಸ್ಸಿನಲ್ಲಿ ಸೈಕಲ್ನಲ್ಲಿ 5 ಸಾವಿರ ಕಿಮೀ ಕ್ರಮಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ (Indian Book of Records) ಸ್ಥಾನ ಪಡೆದಿದ್ದಾರೆ. ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ 60ನೇ ವಯಸ್ಸಿನಲ್ಲಿ ಫುಟ್ ಕಾರ್ನ್ (ಕಾಲಿನಲ್ಲಿ ಉಂಟಾಗುವ ಆಣಿ) ಆಗಿತ್ತು. ಇದರಿಂದ ನಡೆಯಲು ಕೂಡ ಸಾಧ್ಯವಾಗುತ್ತಿರಲ್ಲಿಲ್ಲ. ಹೀಗಾಗಿ ಅವರು ಸಹಜವಾಗಿ ಸೈಕ್ಲಿಂಗ್ ನತ್ತ ತಮ್ಮ ಒಲವು ಹರಿಸಿದರು. ಅಲ್ಲದೆ ಸೈಕ್ಲಿಂಗ್ ಮಾಡುವುದರಿಂದ ದೈಹಿಕ ಆರೋಗ್ಯವಾಗಿರಬಹುದು ಮತ್ತು ಪರಿಸರ ರಕ್ಷಣೆಯಾಗುತ್ತದೆ ಎಂಬ ನಿಲುವು ತಾಳಿದ ಗುರುಮೂರ್ತಿಯವರು ಸೈಕ್ಲಿಂಗ್ ಆರಂಭಿಸಿದರು.
ಅಲ್ಲದೆ ಈಗಿನ ಯುವ ಪೀಳಿಗೆ ಮೋಟಾರು ವಾಹನಗಳತ್ತ ಮಾರು ಹೋಗುತ್ತಿದ್ದು, ಇದರಿಂದ ಪರಿಸರ ಮಾಲಿನ್ಯವಾಗುತ್ತದೆ ಮತ್ತು ಆರೋಗ್ಯ ಕೂಡ ಹಾಳಾಗುತ್ತದೆ. ಇದರ ಬಗ್ಗೆ ಯುವ ಜನತೆಯಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸೈಕ್ಲಿಂಗ್ ಆರಂಭಿಸಿದರು. ಸೈಕ್ಲಿಂಗ್ ವ್ಯಾಯಾಮದ ಒಂದು ರೂಪವಾಗಿದೆ. ಮತ್ತು ಸೈಕಲ್ ಬಳಸುವುದರಿಂದ ಪರಿಸರವನ್ನು ಸಂರಕ್ಷಣೆಯಾಗುತ್ತದೆ.
ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಮತ್ತು ಪರಿಸರವನ್ನು ರಕ್ಷಿಸುವ ದೃಷ್ಟಿಯಿಂದ ಗುರುಮೂರ್ತಿ ಅವರು ಸೈಕ್ಲಿಂಗ್ ಆರಂಭಿಸಿದರು. ಗುರುಮೂರ್ತಿ ಅವರು ಮೇ 11 ರಿಂದ ಆಗಸ್ಟ್ 18 ರ ವರೆಗೆ ಒಟ್ಟು 5,000 ಕಿಮೀ ದೂರವನ್ನು 100 ದಿನಗಳವರೆಗೆ ಪ್ರತಿದಿನ 50 ಕಿಮೀ ಸೈಕಲ್ ಸವಾರಿ ಮಾಡಿದರು. ಗುರಮೂರ್ತಿ ಅವರು ಪ್ರತಿದಿನ ಬೆಳಿಗ್ಗೆ 5 ರಿಂದ 8 ಗಂಟೆ ಒಳಗೆ ಸೈಕಲ್ನಲ್ಲಿ 50 ಕಿಮೀ ಕ್ರಮಿಸುತ್ತಿದ್ದರು. ಅಂತಿಮವಾಗಿ ಅವರು 63 ವರ್ಷ, 9 ತಿಂಗಳು ಮತ್ತು 2 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಅವರ ಹೆಸರು ಸೇರಿತು.
ಗುರುಮೂರ್ತಿ ಅವರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ತಮ್ಮ ಹೆಸರು ಸೇರಿಸಲು ಒಂದೇ ಲೇನ್ನಲ್ಲಿ ನಾಲ್ಕು ಕಿಮೀ ಕ್ರಮಿಸಲು ಪ್ರಯತ್ನಿಸಿದರು. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಬೈಸಿಕಲ್ ಕ್ಲಬ್ ಎರಡು ಬಾರಿ ಆಯೋಜಿಸಿತ್ತು. ತನ್ನ ಧ್ಯೇಯೋದ್ದೇಶದ ಹೊರತಾಗಿ, ಅವರು ಯುವಕರನ್ನು ಸೈಕ್ಲಿಂಗ್ ಆಯ್ಕೆ ಮಾಡಲು ಪ್ರೋತ್ಸಾಹಿಸುತ್ತಾರೆ.
ಪರಿಸರವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಬಿಟ್ಟುಕೊಡುವುದು ನನ್ನ ಏಕೈಕ ಉದ್ದೇಶವಾಗಿದೆ. ಜಗತ್ತು ಜಾಗತಿಕ ತಾಪಮಾನದಿಂದ ಬಳಲುತ್ತಿದೆ. ಪಳೆಯುಳಿಕೆ ಇಂಧನಗಳ ಮೇಲೆ ಚಲಿಸುವ ವಾಹನಗಳಿಂದ ಹಸಿರನ್ನು ರಕ್ಷಿಸುವುದು ಅತಿಮುಖ್ಯವಾಗಿದೆ. ಹಾಗಾಗಿ ಸೈಕ್ಲಿಂಗ್ ನನ್ನ ಕೊನೆಯ ಆಯ್ಕೆಯಾಗಿದೆ ಎಂದು ಗುರುಮೂರ್ತಿ ಹೇಳಿದರು.
ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ 310 ಮೆಕ್ಯಾನಿಕಲ್ ಮತ್ತು 30 ಎಲೆಕ್ಟ್ರಿಕಲ್ ಬೈಸಿಕಲ್ಗಳನ್ನು ಇರಿಸುವ 34 ಡಾಕಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಯೋಜನೆಗೆ ಚಾಲನೆ ದೊರೆಯದಿದ್ದರೂ ಕ್ರಮೇಣ ಜನರೂ ಅದರತ್ತ ಆಕರ್ಷಿತರಾಗುತ್ತಿದ್ದಾರೆ. ಈ ಸೈಕಲ್ಗಳನ್ನು ಕನಿಷ್ಠ ಒಂದು ಗಮ್ಯಸ್ಥಾನದಿಂದ ಇನ್ನೊಂದಕ್ಕೆ ತಲುಪುವ ಬದಲು ವ್ಯಾಯಾಮದ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ.
ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola
ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ