Wednesday, August 20, 2025

Latest Posts

‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’

- Advertisement -

Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ನನ್ನ ಪಂಚರತ್ನ ಕಾರ್ಯಕ್ರಮ ಉದ್ದೇಶ ಪ್ರತಿ ಕುಟುಂಬಕ್ಕೆ ಶಕ್ತಿ ನೀಡುತ್ತಿತ್ತು. ಅಕ್ಕಿ ದರ ನೂರರ ಗಡಿ ದಾಟುವ ಹಂತದಲ್ಲಿದೆ. ಅನ್ನಭಾಗ್ಯದ ಅಕ್ಕಿ ಬದಲು ಹಣ ನೀಡುತ್ತಿದ್ದಾರೆ. ಅದನ್ನೂ ಯಾರ್ಯಾರಿಗೆ ಕೊಟ್ಟಿದ್ದಾರೊ ಗೊತ್ತಿಲ್ಲ. ಮುಂದೆ 80ರೂ ಅಕ್ಕಿ ಖರೀದಿಸಬೇಕಾದ್ರೆ ಎಲ್ಲಿ ಅಕ್ಕಿ ತರ್ತಾರೆ. ಶಕ್ತಿ ಯೋಜನೆಯಲ್ಲಿ ಹೆಣ್ಣುಮಕ್ಕಳು ಸ್ವಾತಂತ್ರದಿಂದ ಓಡಾಡ್ತಿದ್ದಾರೆ. ಆದ್ರೆ ಸಾರಿಗೆ ಇಲಾಖೆಗೆ ಇನ್ನೂ ಹಣವೇ ಸಂದಾಯ ಆಗಿಲ್ಲ. ಸಾರಿಗೆ ಸಿಬ್ಬಂದಿಯನ್ನ ದಿನಗೂಲಿಯಲ್ಲಿ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಇವೆಲ್ಲವೂ ಅಭಿವೃದ್ಧಿಗೆ ಮಾರಕ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬಿ.ಕೆ ಹರಿಪ್ರಸಾದ್ ಮತ್ತು ಸಿದ್ದರಾಮಯ್ಯ ಗುದ್ದಾಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಿ.ಕೆ ಹರಿಪ್ರಸಾದ್ ಸಿದ್ದರಾಮಯ್ಯ ಮಾತ್ರ ಯಾಕೆ ಹೇಳ್ತೀರಿ..? ಅಲ್ಲಿ ಇನ್ನೂ ಅನೇಕರಿದ್ದಾರೆ, ಮುಂದೆ ಎಲ್ಲಾ ಧ್ವನಿ ಹೊರ ಬರುತ್ತೆ. ಕೇಂದ್ರ ಸರ್ಕಾರದ ಬಳಿ ಹೋಗಿ 50 ಜನ ಕರ್ಕೊಂಡ್ ಬರ್ತೀವಿ ಎಂದು ಹೊರಟಿದ್ದಾರೆ. ಅವರ ಹಗರಣಗಳನ್ನ ಮುಚ್ಚಿ ಹಾಕಿಕೊಳ್ಳೋದಕ್ಕೆ ಹೋಗಿದ್ದಾರೆ. ಇಂದು ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬರಗಾಲದ ಹಿನ್ನಲೆ ವಿದಸಾನಸಭಾ ಕಲಾಪ ನಡೆಯುತ್ತಿದೆ. ಹಲವಾರು ಶಾಸಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಸರ್ಕಾರ ನಿರ್ಲಕ್ಷ್ಯ ‌ಮಾಡುತ್ತಿದೆ ಎಂಬುದನ್ನೂ ಪ್ರಸ್ತಾಪ ಮಾಡಿದ್ದಾರೆ. ತುಮಕೂರು, ಹಾಸದಲ್ಲಿ ಬೆಳೆಯುವ ಕೊಬ್ಬರಿ ಬೆಲೆ ೫೦% ಗಿಂತ ಕಡಿಮೆಯಾಗಿದೆ. ಕಳೆದ ಒಂದು ವರ್ಷದಿಂದ ಬೆಲೆ ಕುಸಿತ ಕಂಡಿದೆ. ತೆಂಗು ಬೆಳೆಗಾರರ ಕಷ್ಟ ನಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂಬ ಬೇಡಿಕೆ ನಡೀತಿದೆ. ವಿಧಾನ ಸಭೆಯಲ್ಲಿ ಚರ್ಚೆ ನಡೆದಾಗ ಕಾಂಗ್ರೆಸ್ ನವರು. ಕೇಂದ್ರದ ಮೇಲೆ ವಿರೋಧ ಪಕ್ಷ ಒತ್ತಡ ತರಬೇಕು ಎನ್ನುತ್ತಿದ್ದಾರೆ. ಎನ್‌ಡಿಎ ಭಾಗವಾದ ಜೆಡಿಎಸ್ ದೇವೇಗೌಡರ ನೇತೃತ್ವದಲ್ಲಿ ಕೇಂದ್ರದ ಗಮನಕ್ಕೆ ತರಬೇಕು ಎಂದಿದ್ದಾರೆ. ನಮ್ಮ‌ ಜಿಲ್ಲೆಯ ಕಾಂಗ್ರೆಸ್ ಶಾಸಕರೊಬ್ಬರು ಮಾತನಾಡುತ್ತಿದ್ರಲ್ಲಾ. ಸದನದಲ್ಲಿ ನಮ್ಮ ಜಿಲ್ಲೆಯ ಶಾಸಕರ ಹೋರಾಟವನ್ನ ನಾನು ಕಂಡಿದ್ದೇನೆ ಎಂದು ಕಾಂಗ್ರೆಸ್ ‌ಶಾಸಕ ಶಿವಲಿಂಗೇಗೌಡ ವಿರುದ್ಧ ಲೇವಡಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನಫೆಡ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಪ್ರತಿ ಜನವರಿ ಯಿಂದ ಆರು ತಿಂಗಳು ಖರೀದಿ ಮಾಡುವುದು ಪ್ರಕ್ರಿಯೆ. ಕಳೆದ ವರ್ಷವೂ ನಫೆಡ್ ಮೂಲಕ ಆರು ತಿಂಗಳು ಬೆಂಬಲ ಬೆಲಯೊಂದಿಗೆ ಖರೀದಿ ಮಾಡಿದೆ. ಖರೀದಿ ಮಾಡುವಾಗ ಕೊಬ್ಬರಿ ಕ್ವಾಲಿಟಿ ಬಗ್ಗೆ ರೈತರಿಗೆ ಮನವರಿಕೆ ಮಾಡಿದ್ದಾರೆ. ಸುಮಾರು 50ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ವಿಂಡಾಲ್ ಗೆ15 ಸಾವಿರ ಹಣ ಕೊಡುತ್ತೇವೆ ಎಂದಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದರು. ಸದನದಲ್ಲಿ ರೇವಣ್ಣ ಇದರ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹಿಂದೆ ಖರೀದಿ ಆಗಿದ್ದ ಕೊಬ್ಬರಿಗೆ ಸಹಾಯ ಧನವನ್ನ ರಾಜ್ಯ ಸರ್ಕಾರ ನೀಡುತ್ತಿಲ್ಲ. ಮುಂದೆ ಖರೀದಿ ಮಾಡೋದಕ್ಕೆ 1250ರೂ ನೀಡಲು ತೀರ್ಮಾನಿಸಿದ್ದಾರೆ. ಇದು ಒಟ್ಟು ಕೇವಲ 60 ಕೋಟಿ ಆಗೋದಿಲ್ಲ. ಕೇಂದ್ರಕ್ಕೆ ಕೊಬ್ಬರಿ ಮಾರಾಟದಿಂದ 595 ಕೋಟಿ ಹಣ ಬೇಕು. ಕೊಬ್ಬರಿ ವಹಿವಾಟಿನಲ್ಲಿ ಕೇಂದ್ರಕ್ಕೆ ಮನ್ನೂರು ಕೋಟಿ ನಷ್ಟ ಆಗುತ್ತೆ. ಇದು ಕೇಂದ್ರ, ರಾಜ್ಯಕ್ಕೆ ದೊಡ್ಡ ಮೊತ್ತವೇನಲ್ಲ.

ನಾಳಿನ ಸದನದಲ್ಲಿ ಈ ಬಗ್ಗೆ ನಮ್ಮ ಶಾಸಕರ ಜೊತೆ ಚರ್ಚಿಸುತ್ತೇನೆ. ನನ್ನ ಆರೋಗ್ಯ ಸರಿ ಇಲ್ಲವಾದ್ರೂ ಪರವಾಗಿಲ್ಲ. ರೈತರಿಗೆ ಅನುಕೂಲ ಆಗೋದಾದ್ರೆ. ಸರ್ಕಾರದ ಕಣ್ಣು ತೆರೆಸಬೇಕಾದ್ರೆ. ಅರಸೀಕೆರೆ ಯಿಂದ ತುಮಕೂರಿಗೆ ಪಾದಯಾತ್ರೆ ಮಾಡುತ್ತೇನೆ. ಎನ್‌ಡಿಎ ಸೇರಿದ್ದೇವೆ ಎಂದು ನಾವು ಮೃದು ಧೋರಣೆ ‌ತೋರುವುದಿಲ್ಲ. ನಾನೇ ಅಧಿಕಾರಲ್ಲಿ ಇದ್ದಿದ್ರೆ, ರೈತರಿಗೆ 15ಸಾವಿರ ಬೆಂಬಲ ಬೆಳೆ ನೀಡುತ್ತಿದ್ದೆ. ನಮ್ಮ ರೈತರಿಗೆ, ಜನಕ್ಕೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ ಎಂದರು.

ನಾನು ಮುಖ್ಯಮಂತ್ರಿ ಆದಾಗ ಕೊಬ್ಬರಿಗೆ ಬೆಂಬಲವಾಗಿ 180 ಕೋಟಿ ಹಣ ಕೊಟ್ಟೆ. ಈರುಳ್ಳಿ,‌ ಕೊಬ್ಬರಿ, ಟೊಮ್ಯಾಟೊಗೆ ಬೆಂಬಲ ಬೆಲೆ ನೀಡಿದ್ದೇನೆ. ಈಗಲೂ ಸರ್ಕಾರ ರೈತರ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕು. ಎಚ್ಚರಿಡುವ ಕೆಲಸವನ್ನೂ ನಾವು ಮಾಡುವ ರೂಪುರೇಷೆ ತಯಾರಿಸುತ್ತೇವೆ. ಈ ರಾಜ್ಯ ಉದ್ಧಾರ ಆಗಬೇಕಾದ್ರೆ ಜಾತಿಗಣತಿ ಬೇಕಿಲ್ಲ. ಆರ್ಥಿಕ ಸಮೀಕ್ಷೆ ಆಗುವಂತೆ ಮಾಡುವ ಕೆಲಸ ಆಗಲಿ. ಅದನ್ನ ಬಿಟ್ಟು ಜಾತಿ ಜಾತಿಗಳ ನಡುವೆ ಹೊಡೆದಾಡಿಸುವ ಕೆಲಸ ಯಾಕೆ..? ಮುಸಲ್ಮಾನರಿಗೆ ಹತ್ತು ಸಾವಿರ ಕೋಟಿ ಕೊಡ್ತೀವಿ ಅಂತೀರಾ ಕೊಡಿ ಬೇಡ ಅನ್ನೊಲ್ಲ. ಆದ್ರೆ ಹಿಂದುಳಿದ ಹಿಂದೂಗಳಿಗೆ ಏನು ಕೊಡ್ತೀರಾ..? ಇದರಲ್ಲೂ ಲೂಟಿ ಹೊಡಿಯಿಯೋದಕ್ಕೆ ಪ್ಲಾನ್ ಇದೆಲ್ಲಾ. ನನಗೆ ಹೇಗೆ ಕಮಿಷನ್ ಹೊಡೆಯುತ್ತಾರೆ ಗೊತ್ತಿದೆ. ಹೀಗೆ ಹಣ ಹಂಚೋದಾದ್ರೆ ರೈತರಿಗೆ ಏನು ಕೊಡ್ತೀರಿ‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಪಣ್ಣ ಹೇಳಿದ್ದಾರಲ್ಲ ಇವರ ಸರ್ಕಾರದಲ್ಲೂ ಕಮಿಷನ್ ನಡೆಯುತ್ತಿದೆ ಎಂದು. ಇವರು ಅಧಿಕಾರಕ್ಕೆ ಬಂದು ಮಾಡಿದ್ದೇನು..? ಬಿಜೆಪಿ ಮೇಲೆ ಕಮಿಷನ್ ಆರೋಪದಿಂದ ಅಧಿಕಾರಕ್ಕೆ ಬಂದು ಇವರೇನು ಮಾಡಿದ್ರು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

- Advertisement -

Latest Posts

Don't Miss