Hassan News: ಹಾಸನ : ಪ್ರಿಯಕರ ವಿವಾಹ ನಿರಾಕರಿಸಿದ್ದಕ್ಕೆ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ತಾಲೂಕಿನ, ಶಾಂತಿಗ್ರಾಮದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿಯಾಗಿದ್ದು, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಹೋಬಳಿ ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಈಕೆ ಪ್ರೀತಿಸುತ್ತಿದ್ದಳು. ಹಾಸನದ ಗೋಕುಲದಾಸ್ ಗಾರ್ಮೆಂಟ್ಸ್ನಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಈ ವೇಳೆ ಪ್ರೇಮಾಂಕುರವಾಗಿದ್ದು, ಒಂದೂವರೆ ವರ್ಷದಿಂದ ಅಮೃತ ಮತ್ತು ದಿಲೀಪ್ ಪ್ರೀತಿಸುತ್ತಿದ್ದರು.
ಎರಡು ತಿಂಗಳ ಹಿಂದೆ ಅಮೃತಾಳ ಪೋಷಕರಿಗೆ ಈ ವಿಷಯ ಗೊತ್ತಾಗಿ, ದೀಪಕ್ ಜೊತೆ ಮಾತನಾಡಲು, ಅಮೃತ ಪೋಷಕರು ದೀಪಕ್ನನ್ನು ಮಾರ್ಚ್ 11ರಂದು ಮನೆಗೆ ಬರಲು ಹೇಳಿದ್ದರು. ಆದರೆ ಅಂದು ದಿಲೀಪ್ ನುಗ್ಗೇನಹಳ್ಳಿಯಲ್ಲಿ ಅಮೃತಾಳನ್ನು ಭೇಟಿ ಮಾಡಿದ್ದ ದಿಲೀಪ್, ನಿನ್ನನ್ನು ನಾನು ಮದುವೆಯಾಗಲು ಸಾಧ್ಯವಿಲ್ಲ. ನನಗೂ ನಿನಗೂ ಯಾವುದೇ ಸಂಬಂಧವಿಲ್ಲ. ನಮ್ಮಿಬ್ಬರ ಜಾತಿ ಬೇರೆ ಬೇರೆ ಎಂದು ಹೇಳಿ ಅಲ್ಲಿಂದ ವಾಪಸ್ಸಾಗಿದ್ದ.
ನಂತರ ಕೆಲಸಕ್ಕೆ ಬರಲು ಅಮೃತ ಹಾಸನ ಬಸ್ ಹತ್ತಿದ್ದು, ಗೆಳತಿಯೊಂದಿಗೆ ಶಾಂತಿಗ್ರಾಮದ ತನಕ ಬಂದು, ಅಲ್ಲಿಯೇ ಇಳಿದುಕೊಂಡಿದ್ದಳು. ಮಗಳು ಮನೆಗೆ ಬರದೇ ಇದ್ದಾಗ, ಪೋಷಕರು ಎಲ್ಲ ಕಡೆ ಹುಡುಕಾಡಿ, ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ನುಗ್ಗೇಹಳ್ಳಿ ಪೊಲೀಸರು, ನಾಪತ್ತೆ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಿದಾಗ, ಇಂದು ಶಾಂತಿಗ್ರಾಮ ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಅಮೃತಾಳ ಶವ ಪತ್ತೆಯಾಗಿದೆ. ಪ್ರೀಯಕರ ಕೈಕೊಟ್ಟ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತ ಯುವತಿ ಕುಟುಂಬಸ್ಥರ ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ