Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ.
ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಶ್ರೀ, ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದವರು ಹಕ್ಕಬುಕ್ಕರು. ಇವತ್ತು ಕೂಡಾ ವಿಜಯನಗರ ಸಾಮ್ರಾಜ್ಯದ ಹೆಸರು ಪ್ರಖ್ಯಾತಿ ಪಡೆದಿದೆ. ಅದನ್ನು ಕಟ್ಟಿದವರು ಹಕ್ಕಬುಕ್ಕರು, ಹಕ್ಕಬುಕ್ಕರ ಹಾಲುಮತದ ಸಮಾಜದವರು. ಆ ಸಮಾಜಕ್ಕೆ ಅಧಿಕಾರ ಬಂದರೆ ಸುಲಭವಾಗಿ ಕಿತ್ತುಕೊಳ್ಳಲು ಆಗೋದಿಲ್ಲ. ಸಮಾಜದ ಮೇಲೆ, ರಾಜ್ಯದ ಮೇಲೆ ಒಳ್ಳೆ ಕೆಲಸ ಮಾಡುವರಿಗೆ ಕೆಡುಕು ಆಗೋದು ಕಷ್ಟ. ಹಾಲು ಮತದ ಸಮಾಜದ ಸಿದ್ದರಾಮಯ್ಯ ಅವ್ರು ಅಧಿಕಾರದಲ್ಲಿದ್ದಾರೆ. ಅವರಿಂದ ಅಧಿಕಾರ ಕಿತ್ತುಕೊಳ್ಳುವದು ಕಷ್ಟ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ಐದು ವರ್ಷ ಆಡಳಿತ ನಡೆಸಿದ್ದಾರೆ. ಯಾರು ಅಧಿಕಾರ ಕಿತ್ತುಕೊಳ್ಳಲು ಆಗಿಲ್ಲ ಎಂದು ಕೋಡಿಶ್ರೀ ಹೇಳಿದ್ದಾರೆ.
ಇವತ್ತಿನ ರಾಜಕೀಯ ಚಿಂತನೆ ಮಾಡುವುದಾದರೆ. ಈ ಮುಖ್ಯಮಂತ್ರಿ ಅಧಿಕಾರ ಕಿತ್ತುಕೊಳ್ಳುವದು ಕಷ್ಟ. ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯ ನಮಗೆ ಇದೆ. ಬದಲಾವಣೆ ಕುರಿತು, ಯುಗಾದಿ ನಂತರ ಅದರ ಬಗ್ಗೆ ಹೇಳಬಹುದು. ಡಿಕೆ ಶಿವಕುಮಾರ್ ಒಕ್ಕಲಿಗರು, ಒಕ್ಕಲಿಗರು ಅನ್ನದಾತರು, ಅವರನ್ನು ಇಡೀ ಜಗತ್ತು ಮರೆಯೋದಿಲ್ಲ. ಇದಕ್ಕೆ ಜಾತಿ ಲೇಪನ ಹಚ್ಚುವದು ಬೇಡ, ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗುತ್ತದೆ, ಶುಭ ಯೋಗ ಇದೆ. ಪ್ರಕೃತಿ ದೋಷ ಬಹಳ ಇದೆ, ಭೂಮಿ ಸುನಾಮಿ, ಗಾಳಿ ಸುನಾಮಿ ಕಳೆದ ವರ್ಷಕ್ಕಿಂತ ಹೆಚ್ಚು ಇದೆ.
ಬಿಸಿಲು ಧಗೆ, ಹಿಮಪಾತ ಆಗುತ್ತದೆ. ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ದೂರಾಭಿಮಾನ ಇಲ್ಲ. ಅವರ ಬಗ್ಗೆ ಅಭಿಮಾನ ಇದೆ, ಮೊದಲಿನಿಂದ ಹೋರಾಟ ಮಾಡಿಕೊಂಡು ಬಂದಿದ್ದಾನೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.