state news
ಬೆಂಗಳೂರು(ಫೆ.21): ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ ಮಧ್ಯೆ ಪ್ರವೇಶಿಸಿ ಮಾತನಾಡಿದ ಜೆಡಿಎಸ್ ನಾಯಕಿ ಅನಿತಾಕುಮಾರಸ್ವಾಮಿ ನಿವೇಲ್ಲಿ ಶ್ರಮವಹಿಸಿದ್ದೀರಿ , ಜಿಲ್ಲೆಯ ಅಭಿವೃದ್ದಿಗೆ ಶ್ರಮವಹಿಸಿದ್ದು, ಎಂದು ಕೆಲವು ದಾಖಲೆಗಳನ್ನು ತೋರಿಸಿದರು .
ನಾನು ಕುಮಾರಸ್ವಾಮಿಯವರ ಅಧಿಕಾರ ಅವಧಿಯಲ್ಲಿ ಹಾರೋಹಳ್ಳಿ ತಾಲೂಕ ಮಾಡುವುದಕ್ಕೆ ತಾತ್ವಿಕ ಅನುಮೋದನೆ ಕೊಟ್ಟಿತ್ತು ಆದರೆ 2022 ರಲ್ಲಿ ಈ ಕೆಲಸ ಆಗಿದೆ. ನಮ್ಮ ಸರ್ಕಾರದಲ್ಲಿ ಅಂತಿಮ ಅಧಿಸೂಚನೆ ಕೊಡಲಾಗಿದೆ. ಹುದ್ದೆಗಳ ನೇಮಕಾತಿಯನ್ನು ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿ ಶೀಘ್ರವೇ ಆರಂಭ ಮಾಡುತ್ತೇವೆ. ಮುಖ್ಯಮಂತ್ರಿಗಳಿಂದ ಶಂಕು ಸ್ಥಾಪನೆ ನೆರವೇರಿಸುತ್ತೇವೆ ಎಂದು ಅಶ್ವಥ್ಥನಾರಾಯಣ ಹೇಳಿದರು.
ರಾಮನಗರಕ್ಕೆ 450ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಕೊಟ್ಟಿದ್ದೇವೆ ಎಂದು ಉಸ್ತುವಾರಿ ಸಚಿವರು ಹೇಳಿದರು. ಆದರೆ ಇದು ಬಿಜೆಪಿ ಸರ್ಕಾರ ಬರುವ ಮೊದಲೇ ಆಗಿತ್ತು. ಕುಮಾರಸ್ವಾಮಿ ಅವರನ್ನು ಬರುವಂತೆ ಮನವಿ ಮಾಡಿದ್ದೆ. ನನಗೆ ಸುಳ್ಳು ಹೇಳಲು ಬರುವುದಿಲ್ಲ ಎಂದು ಹೇಳಿದರು.