Political News: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮಹಿಳೆ ಲತಾ ಎಂಬುವವರು ತಮಗೆ ಬಂದ ಗೃಹ ಲಕ್ಷ್ಮೀ ಹಣವನ್ನು ಖರ್ಚು ಮಾಡದೇ, ಕೂಡಿಟ್ಟು, ಯುಗಾದಿ ಹಬ್ಬಕ್ಕೆ ಫ್ರಿಜ್ ಖರೀದಿ ಮಾಡಿದ್ದಾರೆ. 17ವರೆ ಸಾವಿರ ರೂಪಾಯಿ ಕೊಟ್ಟು ಮನೆಗೊಂದು ಫ್ರಿಜ್ ಖರೀದಿ ಮಾಡಿದ್ದಾರೆ.
ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಸಖತ್ ಸದ್ದು ಮಾಡಿತ್ತು. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸಂತೋಷ ವ್ಯಕ್ತಪಡಿಸಿದ್ದಾರೆ.
ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ ಜನ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ತೋಟದಲ್ಲಿ ವ್ಯಕ್ತಿ ಶ*ವಪತ್ತೆ ಪ್ರಕರಣ: ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸಕ್ಸಸ್
ಕಂಪನಿಯೊಂದಕ್ಕೆ ನೀಡಿದ್ದ ಸಮೋಸಾದಲ್ಲಿ ಕಂಡುಬಂದಿದ್ದು ಕಾಂಡೋಮ್, ಗುಟ್ಕಾ..