National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ ಹೋಗಿದ್ದ.
ಅಯ್ಯಪ್ಪನ ದರ್ಶನ ಮುಗಿಸಿ ಬೆಟ್ಟ ಇಳಿಯುವಾಗ ಪ್ರಜ್ವಲ್ಗೆ ಹೃದಯಾಘಾತವಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದ“ಯ್ಯಲಾಯಿತು. ಆದರೆ ಮಾರ್ಗಮಧ್ಯೆ ಪ್ರಜ್ವಲ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಶಬರಿಮಲೈ ಪೋಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ. ಕನಕಪುರಕ್ಕೆ ತರಲು ಕುಟುಂಬಸ್ಥರು ತಯಾರಿ ನಡೆಸಿದ್ದಾರೆ. ಕೆಲ ತಿಂಗಳಿಂದ ಹಲವು ಯುವಕ, ಯುವತಿಯರು ಹೃದಯಾಘಾತದಿಂದ ಮೃತಪಡುತ್ತಿರುವುದು ದುಃಖಕರ ಸಂಗತಿ.