Saturday, July 27, 2024

Latest Posts

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

- Advertisement -

Hassan News: ಹಾಸನ : ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ನಂತರ ಕೆಎಸ್‌ಆರ್‌ಟಿಸಿ ಬಸ್ ಕೂಡ ರಸ್ತೆಯಲ್ಲಿ ಹೊತ್ತಿ ಉರಿದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬೇಡಿಗನಹಳ್ಳಿ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಮತ್ತು ಬಸ್ ಎರಡೂ ಬೆಂಗಳೂರಿನಿಂದ ಹೊರಟಿತ್ತು. ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಬಳಿಕ ಬಸ್ ಹೊತ್ತಿ ಉರಿದಿದ್ದು, ಕೂಡಲೇ ಬಸ್‌ನನ್ನು ರಸ್ತೆಯಲ್ಲೇ ನಿಲ್ಲಿಸಲಾಗಿದೆ. ಬಳಿಕ ಪ್ರಯಾಣಿಕರನ್ನೆಲ್ಲ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಇದಾದ ಬಳಿಕ ಸಂಪೂರ್ಣವಾಗಿ ಬಸ್ ಹೊತ್ತಿ ಉರಿದಿದೆ.

ಘಟನೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಮೃತದೇಹಗಳನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್

ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..

- Advertisement -

Latest Posts

Don't Miss