Movie News: ನಟ ಕಿಚ್ಚ ಸುದೀಪ್ ರಾಯಚೂರು ಜಿಲ್ಲೆಯ ಮಂತ್ರಾಲಯದ ಗುರುರಾಯರ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿದ್ದಾರೆ.
ಸಿನಿಮಾ ರಿಲೀಸ್ ಸಂದರ್ಭದಲ್ಲಿ ಮತ್ತು ಪ್ರತೀ ವರ್ಷ ಸುದೀಪ್ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ ಈ ಬಾರಿ ರಾಯಚೂರಿನ ಮಂತ್ರಾಲಯದಲ್ಲಿರುವ ರಾಯರ ಮಠಕ್ಕೆ ಭೇಟಿ ಕೊಟ್ಟಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಆಂಜನೇಯ ಸ್ವಾಮಿಯ ದರ್ಶನ ಮಾಡಿ, ಅಲ್ಲಿ ಪತ್ನಿಯೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನು ರಾಯಚೂರಿಗೆ ತಮ್ಮ ನೆಚ್ಚಿನ ನಟ ಬಂದಿದ್ದಾನೆಂದು ತಿಳಿದ ಕಿಚ್ಚನ ಅಭಿಮಾನಿಗಳು ಸ್ಥಳಕ್ಕಾಗಮಿಸಿದ್ದು, ಅವರನ್ನು ಕಂಟ್ರೋಲ್ ಮಾಡಲು ಸ್ಥಳೀಯ ಪೊಲೀಸರು ಪರದಾಡಬೇಕಾಯಿತು.
ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ