ಬೆಳಗಾವಿ : ಕೊರೊನ ಮೂರನೇ ಅಲೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಳಗಾವಿ ಕೋನಗೊಳಿ ಚೆಕ್ ಪೋಸ್ಟ್ ಗೆ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋನಗೊಳಿ ಸೇರಿದಂತೆ ಅನೇಕ ಚೆಕ್ ಪೋಸ್ಟ್ ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಎಡಿಜಿಪಿ ಉಮೇಶ್ ಕುಮಾರ್ ಮಾತನಾಡಿದರು.
ಸದ್ಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಿಂದ ಬರುವ ಪ್ರಯಾಣಿಕರಿಗೆ Rtpcr ವರದಿ ಕಡ್ಡಾಯ ಮಾಡಲಾಗಿದ್ದು, ಕೋವಿಡ್ ನೆಗಟಿವ್ ರಿಪೋರ್ಟ್ ಇಲ್ಲದವರನ್ನ ವಾಪಸ್ಸು ಕೂಡ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಬೆಳಗಾವಿ ಜಿಲ್ಲಾಡಳಿತದ ಕಾರ್ಯ ಚನ್ನಾಗಿದೆ, ಬಾರ್ಡರ್ ಏರಿಯಾದಲ್ಲಿ ಫೋಕಸ್ ಮಾಡುವಂತೆ ಸಲಹೆ ನೀಡಿದ್ದೇನೆ, 22 ಚೆಕ್ ಪೋಸ್ಟ್ ಗಳನ್ನ ಗುರುತಿಸಲಾಗಿದ್ದು ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ, ಹೆಚ್ಚುವರಿ ಸಿಬ್ಬಂದಿಯನ್ನು ಕೂಡ ನಿಯೋಜನೆ ಮಾಡಲಾಗಿದೆ, ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಪೊಲೀಸ್ ಇಲಾಖೆಯೊಂದಿಗೆ ಉತ್ತಮ ಸಂಯೋಜನೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.
ನಾಗೇಶ್, ಕರ್ನಾಟಕ ಟಿವಿ, ಬೆಳಗಾವಿ