Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಸಲುವಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಆಗಮಿಸಿದರು.
ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಅಖಿಲೇಶ್ ಯಾದವ್ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಅವರು ಸ್ವಾಗತಿಸಿದರು. ಈ ಸಮಯದಲ್ಲಿ ಸಚಿವರಾದ ಎಂ. ಬಿ. ಪಾಟೀಲ ಉಪಸ್ಥಿತರಿದ್ದರು.
Mamatha Banerjee : ಬೆಂಗಳೂರಿಗೆ ಆಗಮಿಸಿದ ಮಮತಾ ಬ್ಯಾನರ್ಜಿಯನ್ನು ಬರಮಾಡಿಕೊಂಡ ಡಿಕೆಶಿ