Sunday, September 8, 2024

Latest Posts

ಹಿಂದೂ ಧರ್ಮಕ್ಕೆ ಮತಾಂತರ ಆಗಲು ಕಾರಣ ನೀಡಿದ ಅಲಿ ಅಕ್ಬರ್ ..!

- Advertisement -

ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್​  ಅವರು ಹಿಂದೂ ಧರ್ಮಕ್ಕೆ ಮತಾಂತರ ಆಗಲು ನಿರ್ಧರಿಸಿದ್ದಾರೆ. ‘ನಾನು ಮತ್ತು ನನ್ನ ಹೆಂಡತಿ ಹಿಂದೂ ಧರ್ಮಕ್ಕೆ ಮತಾಂತರ ಆಗುತ್ತೇವೆ. ಇನ್ನೆಂದೂ ನಾವು ಮುಸ್ಲಿಮರಾಗಿ ಮುಂದುವರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಬಿಪಿನ್​ ರಾವತ್​  ಅವರ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು ಕಮೆಂಟ್​ ಮಾಡಿದ್ದನ್ನು ಖಂಡಿಸಿ ,ದೇಶವಿರೋಧಿ ಮುಸ್ಲಿಮರ ಕೃತ್ಯವನ್ನು ಯಾವುದೇ ಮುಸ್ಲಿಂ ನಾಯಕರೂ ಖಂಡಿಸಿಲ್ಲ ಹಾಗಾಗಿ ಈ ಧರ್ಮದ ಬಗ್ಗೆ ತಮಗೆ ನಂಬಿಕೆ ಉಳಿದಿಲ್ಲ ಎಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಹಾಗಾಗಿ ಫೇಸ್​ಬುಕ್​ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಅವರು ತಿಳಿಸಿದ್ದಾರೆ. ಹುಟ್ಟಿನಿಂದ ನಾನು ಪಡೆದ ಗುರುತನ್ನು ಇಂದು ತ್ಯಜಿಸುತ್ತಿದ್ದೇನೆ. ಇಂದಿನಿಂದ ನಾನು ಮುಸ್ಲಿಂ ಅಲ್ಲ. ಇಂದಿನಿಂದ ನಾನು ಭಾರತೀಯ. ಭಾರತದ ವಿರುದ್ಧ ನಗುವ ಎಮೋಜಿಗಳನ್ನು ಪೋಸ್ಟ್​ ಮಾಡಿದ ಜನರಿಗೆ ಇದೇ ನನ್ನ ಉತ್ತರ’ ಎಂದು ಅಲಿ ಅಕ್ಬರ್​ ಹೇಳಿದ್ದಾರೆ. ಅಲಿ ಅಕ್ಬರ್ ಮಾಡಿರುವ ಈ ಪೋಸ್ಟ್​ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಅದೇ ರೀತಿ ಕೆಲವು ಮುಸ್ಲಿಮರಿಂದ ವಿರೋಧ ಕೂಡ ವ್ಯಕ್ತವಾಗಿದೆ. ಕೆಲವರು ಅವಾಚ್ಯ ಶಬ್ಧಗಳಿಂದ ಅಲಿ ಅಕ್ಬರ್​ ಅವರನ್ನು ನಿಂದಿಸಿದ್ದಾರೆ. ಅಂಥವರಿಗೆ ಅದೇ ರೀತಿಯ ಭಾಷೆಯಲ್ಲಿ ಅಲಿ ಅಕ್ಬರ್​ ಉತ್ತರ ನೀಡಿದ್ದಾರೆ.ಈ ವಿಡಿಯೋ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಫೇಸ್​ಬುಕ್​ನಿಂದ ಅದು ಕಾಣೆ ಆಗಿದೆ. ಬಳಿಕ ವಾಟ್ಸಪ್​ ಮೂಲಕ ವೈರಲ್​ ಆಗಿದೆ. ಬಿಪಿನ್​ ರಾವತ್ ಅವರ ಸಾವನ್ನು ಸಂಭ್ರಮಿಸುವವರನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ನೀಡಬೇಕು ಎಂದು ಅಲಿ ಅಕ್ಬರ್​ ಅವರು ಆಗ್ರಹಿಸಿದ್ದಾರೆ.

- Advertisement -

Latest Posts

Don't Miss